Webdunia - Bharat's app for daily news and videos

Install App

ತಹಸೀಲ್ದಾರ್ ಕಚೇರಿಯಲ್ಲಿ ಭ್ರಷ್ಟಾಚಾರ; ದಾಳಿ ಮಾಡಿ ಕುಳ ಹಿಡಿದ ಎಸಿಬಿ

Webdunia
ಸೋಮವಾರ, 6 ಮೇ 2019 (18:46 IST)
ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಇಬ್ಬರು ಅಧಿಕಾರಿಗಳು.
ಪ್ರತ್ಯೇಕ ಪ್ರಕರಣಗಳಲ್ಲಿ ಮುದ್ದೇಬಿಹಾಳ ಭೂ ದಾಖಲೆ ಇಲಾಖೆ ಅಧಿಕಾರಿ ಹಾಗೂ ವಿಜಯಪುರ ಜಿಲ್ಲೆಯ  ಬಸವನ ಬಾಗೇವಾಡಿಯ ತಹಶೀಲ್ದಾರ್ ಕಚೇರಿಯ ಎಫ್.ಡಿ.ಸಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಮುದ್ದೇಬಿಹಾಳ ಭೂ ದಾಖಲೆ ವಿಭಾಗದ ಅಧಿಕಾರಿ ದೇವಾನಂದ ರಾಠೋಡ ಎವಿಬಿ ಬಲೆಗೆ ಬಿದ್ದಿದ್ದಾರೆ.
ಜಮೀನು ನಕ್ಷೆ ನೀಡಲು ಪಾಂಡುರಂಗ ಕುಲಕರ್ಣಿ ಎಂಬುವರಿಂದ 2 ಸಾವಿರ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಬಾಡಿಗೆ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದ ಅಧಿಕಾರಿ ಇವರಾಗಿದ್ದಾರೆ.

ಇನ್ನು ಬಸವನ ಬಾಗೇವಾಡಿ ತಹಶೀಲ್ದಾರ್ ಕಚೇರಿಯ ಎಫ್.ಡಿ.ಸಿ ಹುಡೇದ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕೃಷಿ ಜಮೀನು ಎನ್.ಎ ಮಾಡಿ‌ ಕೊಡಲು 5 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಲುಕಿದ್ದಾರೆ. 19 ಗುಂಟೆ ಜಮೀನು ಎನ್.ಎ ಮಾಡಿ ಕೊಡಲು ಲಂಚ ಕೇಳಿದ್ದರು ಹುಡೇದ್.

ವಿಜಯಪುರ ನಗರದ ಹೊರವಲಯದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ ಎಫ್.ಡಿ.ಸಿ.

ಎಸಿಬಿ ಡಿಎಸ್ಪಿ ರಘು ನೇತೃತ್ವದಲ್ಲಿ ಎಸಿಬಿ ಇನ್ಸಪೆಕ್ಟರ್ ಗಣಾಚಾರಿ ಹಾಗೂ ಚಲುವಾದಿ ನಡೆಸಿದ ಕಾರ್ಯಾಚರಣೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments