Webdunia - Bharat's app for daily news and videos

Install App

ಕೃಷಿ ಇಲಾಖೆಯಲ್ಲಿ ರೈತರಿಗೆ ನೀಡುವ ಕೃಷಿ ಯಂತ್ರೋಪಕರಣಗಳ ಖರೀದಿ ಹಂಚಿಕೆಯಲ್ಲಿ ಭ್ರಷ್ಟಾಚಾರ

Webdunia
ಮಂಗಳವಾರ, 7 ಸೆಪ್ಟಂಬರ್ 2021 (21:21 IST)
ಕೃಷಿ ಇಲಾಖೆಯಲ್ಲಿ ರೈತರಿಗೆ ನೀಡುವ ಕೃಷಿ ಯಂತ್ರೋಪಕರಣಗಳ ಖರೀದಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಭ್ರಷ್ಟ ಮುಕ್ತ ಕರ್ನಾಟಕ (ಎಸಿಎಫ್) ಸಂಘಟನೆಯ ರಾಜ್ಯಾಧ್ಯಕ್ಷ ಎನ್.ಕೃಷ್ಣಮೂರ್ತಿ ಅವರು, ಸಚಿವ ಬಿ.ಸಿ. ಪಾಟೀಲ್ ಹಾಗೂ ಹೆಚ್ಚುವರಿ ಕೃಷಿ ನಿರ್ದೇಶಕ ಎಂ.ಎಸ್.ದಿವಾಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ. 
ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ  ರೈತರಿಗೆ ಸ್ಪ್ರಿಂಕ್ಲರ್, ಡೀಸೆಲ್ ಪಂಪ್‍ಸೆಟ್, ಪವರ್ ಸ್ಪ್ರೇಯರ್, ಬ್ಯಾಟರಿಚಾಲಿತ ಬ್ಯಾಕ್ ಸ್ಪ್ರೇಯರ್ ಸೇರಿದಂತೆ ಇನ್ನಿತರ ಉಪಕರಣಗಳನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ರೈತರಿಗೆ ಸಬ್ಸಿಡಿ ದರದಲ್ಲಿ ಈ ಉಪಕರಣಗಳನ್ನು ನೀಡಲಾಗುತ್ತದೆ. ಆದರೆ, ಇದರ ಖರೀದಿ ಹಾಗೂ ಹಂಚಿಕೆಯಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿದೆ. ಯಂತ್ರೋಪಕರಣ ಕಂಪನಿಗಳ ಜತೆ ಶಾಮೀಲಾಗಿ ಸಚಿವರು ತಮ್ಮ ಆಪ್ತ ಅಧಿಕಾರಿ ಹೆಚ್ಚುವರಿ ಕೃಷಿ ನಿರ್ದೇಶಕ ದಿವಾಕರ್ ಮೂಲಕ 210 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಿಕ್‍ಬ್ಯಾಕ್ ಪಡೆದಿz್ದÁರೆ ಎಂದು ದೂರಿನಲ್ಲಿ ಕೃಷ್ಣ ಮೂರ್ತಿ ಆರೋಪಿಸಿದ್ದಾರೆ. 
ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನು ಪಡೆಯದೆಯೇ ಯಂತ್ರೋಪಕರಣ ಪೂರೈಕೆ ಆಗಿದೆ ಎಂದು ಡಿಸಿ ಬಿಲï ಮಾಡಿ ನೂರಾರು ಕೋಟಿ ಲೂಟಿ ಹೊಡೆದಿದ್ದಾರೆ. ಇಲಾಖೆಯು ಕೃಷಿ ಯಂತ್ರೋಪಕರಣ ಖರೀದಿ ಮಾಡಿರುವ ಹಲವು ಕಂಪನಿಗಳು ಪ್ರಭಾವಿಗಳ ಬೇನಾಮಿ ಕಂಪನಿಗಳು ಎಂಬ ಅನುಮಾನವಿದೆ. ಸಚಿವರ ಸೂಚನೆಯಂತೆಯೇ ನಡೆದಿರುವ ಹಗರಣ ಎಂದು ಇಡೀ ಇಲಾಖೆಯೇ ಮಾತನಾಡುತ್ತಿದೆ. ಟೆಂಡರ್‍ನಲ್ಲಿ ಭಾಗವಹಿಸುವ ಸಂಸ್ಥೆಗಳ ಜತೆ ಒಳ ಒಪ್ಪಂದ ಮಾಡಿಕೊಂಡು ತಮಗೆ ಬೇಕಾದ ಕಂಪನಿಗಳಿಗೆ ಟೆಂಡರ್ ಕೊಡುತ್ತಾರೆ. ಕೃಷಿ ಸಾಮಗ್ರಿಗಳ ವಿತರಣೆಯಲ್ಲಿ ಯಾವುದೇ ಕಂಪನಿಗಳು ರೈತರಿಗೆ ಶೇ.50 ರಷ್ಟು ಸಾಮಗ್ರಿಗಳನ್ನು ಪೂರೈಕೆ ಮಾಡಿಯೇ ಇಲ್ಲ. ಇದರದ್ದೇ ಬೇನಾಮಿ ಕಂಪನಿಗಳಾದ ಕಾರಣ ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments