Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದ ಮತ್ತೊಂದು ಹೆಸರೇ ಸಿಎಂ ಸಿದ್ದರಾಮಯ್ಯ: ಮುರುಳಿಧರ್ ರಾವ್

ಭ್ರಷ್ಟಾಚಾರದ ಮತ್ತೊಂದು ಹೆಸರೇ ಸಿಎಂ ಸಿದ್ದರಾಮಯ್ಯ: ಮುರುಳಿಧರ್ ರಾವ್
ಬೆಂಗಳೂರು , ಸೋಮವಾರ, 27 ಮಾರ್ಚ್ 2017 (16:10 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಭ್ರಷ್ಟ ಸರಕಾರ. ಭ್ರಷ್ಟಾಚಾರದ ಮತ್ತೊಂದು ಹೆಸರೇ ಸಿಎಂ ಸಿದ್ದರಾಮಯ್ಯ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಆರೋಪಿಸಿದ್ದಾರೆ.
 
ರೈತ ವಿರೋಧಿ, ಜನವಿರೋಧಿ, ದುರಾಡಳಿತದಿಂದಾಗಿ ರಾಜ್ಯದ ಜನತೆ ಬೇಸತ್ತುಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಸ್ಕ್ಯಾಂಡಲ್ ಮತ್ತು ಸ್ಕ್ಯಾಮ್ ಸರಕಾರವಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿ ಕುಸಿದು ಹೋಗಿದೆ ಎಂದು ಕಿಡಿಕಾರಿದರು.
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಾರದರ್ಶಕ ಸರಕಾರವನ್ನು ಮೆಚ್ಚಿ ಉತ್ತರಪ್ರದೇಶದಲ್ಲಿ ಜನತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದರಂತೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಮಗನೆಂದು ಹೇಳಿಕೊಂಡವನ ವಿರುದ್ಧ ಕ್ರಮಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ