Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ

ಬೆಂಗಳೂರಿಗೆ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ
ಬೆಂಗಳೂರು , ಮಂಗಳವಾರ, 23 ಸೆಪ್ಟಂಬರ್ 2014 (17:25 IST)
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರಕ್ಕೆ ಚೊಚ್ಚಲ ಭೇಟಿ ನೀಡಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಚ್‌ಎಎಲ್‌ನಲ್ಲಿ ಅವರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಮೋದಿ ರಾಜ್ಯಕ್ಕೆ ಭೇಟಿ ಬಿಜೆಪಿ ನಾಯಕರಲ್ಲಿ ಸಂಚಲನ ಉಂಟುಮಾಡಿದ್ದು, ಎಚ್‌ಎಎಲ್‌ನಲ್ಲಿ ಸಾಗರೋಪಾದಿಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದಾರೆ.  ರಾಜ್ಯಪಾಲ ವಜುಭಾಯಿ ಪಟೇಲ್ ಮೋದಿಯನ್ನು ಸ್ವಾಗತಿಸಲು ಎಚ್‌ಎಎಲ್ ವಿಮಾನನಿಲ್ದಾಣಕ್ಕೆ ಹೊರಟಿದ್ದಾರೆ.

ಸಂಜೆ 5.30ರ ಸುಮಾರಿಗೆ ಮೋದಿ ಎಚ್‌ಎಎಲ್ ವಿಮಾನನಿಲ್ದಾಣದಲ್ಲಿ ಬಂದಿಳಿಯಲಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ಬಿಜೆಪಿ ಮುಖಂಡರು ಸಿದ್ದತೆ ನಡೆಸಿದ್ದಾರೆ. ಎಚ್‌ಎಎಲ್‌ನಿಂದ ರಾಜಭವನದವರೆಗೆ ವಿಶೇಷವಾದ ಸಂಚಾರ ವ್ಯವಸ್ಥೆ ಮಾಡಲಾಗಿದೆ. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಸಿಎಂ ಸಿದ್ದರಾಮಯ್ಯ ಕೂಡ ಮೋದಿ ಸ್ವಾಗತಕ್ಕೆ ಏರ್‌ಪೋರ್ಟ್‌ಗೆ ಆಗಮಿಸಿದ್ದಾರೆ.

ಮೋದಿಯ ಆಹಾರಕ್ಕಾಗಿ ವಿಶೇಷ ಖಾದ್ಯವನ್ನು ತಯಾರಿಸಲಾಗಿದೆ. ಸಂಜೆ, ರಾತ್ರಿ, ಬೆಳಗಿನ ಉಪಾಹಾರಕ್ಕೆ ಮೆನು ರೆಡಿಯಾಗಿದೆ. ರಾತ್ರಿ ಗುಜರಾತಿ ಶೈಲಿಯ ಊಟದ ವ್ಯವಸ್ಥೆಯನ್ನು ಮಾಡಿಸಲಾಗಿದೆ. 

Share this Story:

Follow Webdunia kannada