Webdunia - Bharat's app for daily news and videos

Install App

ದ.ಪ.ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Webdunia
ಮಂಗಳವಾರ, 14 ಜೂನ್ 2022 (20:03 IST)
ನಿನ್ನೆ ನಡೆದ ವಿಧಾನಪರಿಷತ್  ನಾಲ್ಕು ಸ್ಥಾನಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಿನ್ನೆ ಮತದಾನ ನಡೆದಿದ್ದು ನಾಳೆ ಫಲಿತಾಂಶ ಹೊರಬೀಳಲಿದೆ. ದಕ್ಷಿಣ ಪದವೀಧರರ ಚುನಾವಣೆ ಮತ ಎಣಿಕೆಗೆ ಸಜ್ಜಾಗಿದ್ದು ಈ ಕುರಿತು ಇಂದು ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ಪ್ರಕಾಶ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
 
ನಾಳೆ ಬೆಳಿಗ್ಗೆ 8ರಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಮೊದಲ ಪ್ರಾಶಸ್ತ್ಯ  ಮತ ಎಣಿಕೆ ಮುಗಿದ ಮೇಲೆ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟು 28 ಟೇಬಲ್ ಗಳ ಅಳವಡಿಕೆ ಮಾಡಲಾಗಿದ್ದು  ಪ್ರತಿ ಟೇಬಲ್ ಗೂ ಇಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರಂತೆ 90 ಸಿಬ್ಬಂದಿ ನೇಮಕ ಮಾಡಲಾಗಿದೆ. 245 ಅಂಚೆ ಮತಗಳು ಇದೆ. ಈ ಪೈಕಿ ಎಷ್ಟು ಚಲಾವಣೆ  ಆಗಿದೆ ಎಂಬುದು ನಾಳೆ ಗೊತ್ತಾಗಲಿದೆ ಎಂದರು.
ಅಭ್ಯರ್ಥಿಗಳ ಪರವಾಗಿ ಟೇಬಲ್ ಗೆ ಒಬ್ಬರಂತೆ ಏಜೇಂಟ್ ಗಳನ್ನು ನೇಮಕಗೊಳಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಒಟ್ಟು 158 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  ಮೊದಲ ಹಂತದಲ್ಲಿ ಮತಗಳನ್ನ ಬಂಡಲ್ ಗಳನ್ನಾಗಿ ಮಾಡಿ 25ರಂತೆ ಬೇರ್ಪಡಿಸಲಾಗುವುದು.ನಾಳೆ ಮಧ್ಯಾಹ್ನದ ನಂತರ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗುವ ಸಾಧ್ಯತೆ ಇದೆ. ಫಲಿತಾಂಶ ನಾಳಿದ್ದು ಬರುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ಮಾಹಿತಿ ನೀಡಿದರು.
 
ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದ್ದು, ಭದ್ರತೆಗಾಗಿ 158 ಮಂದಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಮೂವರು ಎಸಿಪಿ, 8 ಪಿ ಐ, 12 ಪಿ ಎಸ್ ಐ, 15 ಎ ಎಸ್ ಐ, 75 ಹೆಚ್ ಸಿ \ಪಿ ಸಿ, 15 ಮಹಿಳಾ ಪಿ ಸಿ, 10 ಕೆ ಎಸ್ ಆರ್ ಪಿ, 20 ಸಿ ಎ ಆರ್ ಸಿಬ್ಬಂದಿ ನೇಮಕ. ಮಾಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಮುಂದಿನ ಸುದ್ದಿ
Show comments