ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ

Webdunia
ಸೋಮವಾರ, 17 ಅಕ್ಟೋಬರ್ 2022 (19:25 IST)
ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ವರ್ಷಕ್ಕೊಮ್ಮೆ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು, ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ದತೆ ನಡೆಯುತ್ತಿದೆ.. ಕೊಡವರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭಕಕ್ಕೆ ಜಿಲ್ಲಾಡಳಿತ ಕೂಡ ಈಗಾಗಲೇ ತಯಾರಿ ಮಾಡಿಕೊಂಡಿದೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವಿಸ್ಮಯ ನೋಡಲು ಜನರು ಕಾತರರಾಗಿ ಕಾಯುತ್ತಿದ್ದಾರೆ. ವಾರದಿಂದಲೇ ನಾನಾ ಪೂಜಾ ಕೈಂಕರ್ಯಗಳು ನಡೆದಿದ್ದು, ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ.. ಈ ಬಾರಿ ಜಲಪ್ರಳಯದಿಂದ ತತ್ತರಿಸಿರೋ ಜನತೆಗೆ ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಬಂದು ಒಳ್ಳೇದು ಮಾಡಲಿದ್ದಾಳೆ ಅನ್ನೋ ನಂಬಿಕೆ ಭಕ್ತಗಣದ್ದಾಗಿದೆ.. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸೋ ಹಿನ್ನೆಲೆಯಲ್ಲಿ 10 ಕಿಲೋ ಮೀಟರ್ ದೂರದಿಂದಲೇ ಲೈಟಿಂಗ್ ವ್ಯವಸ್ಥೆಗಾಗಿ 500ಕ್ಕೂ ಹೆಚ್ಚು ಟ್ಯೂಬ್ ಲೈಟ್​ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.. ಕಾವೇರಿ ಮಾತೆಯ ದರ್ಶನಕ್ಕೆ ಸಹಸ್ರಾರು ಭಕ್ತರು ಲಗ್ಗೆಯಿಡುತ್ತಿದ್ದು, ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments