Webdunia - Bharat's app for daily news and videos

Install App

ಮತ ಏಣಿಕೆಗೆ ಕ್ಷಣಗಣನೆ; ನಿಷೇಧಾಜ್ಞೆ ಜಾರಿ

Webdunia
ಬುಧವಾರ, 22 ಮೇ 2019 (15:16 IST)
ಭಾರಿ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಇನ್ನೇನು, ಪ್ರಕ್ರಿಯೆ ಆರಂಭಕ್ಕೆ ಕಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದೆ.  ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ  ಬಹಳ ಕಾತುರತೆಯಿಂದ ಕಾಯುತ್ತಿರುವ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. 

ಮತ ಏಣಿಕೆ ಪ್ರಕ್ರಿಯೆಗೆ ಈಗಾಗಲೇ, ಎಲ್ಲಾ ಅಗತ್ಯ ತಯಾರಿ ನಡೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್  ವ್ಯವಸ್ಥೆಯಲ್ಲಿ ಏಣಿಕೆ ಕಾರ್ಯ ನಡೆಯಲಿದ್ದು, ಶಿವಮೊಗ್ಗದಲ್ಲಿ 144 ನೇ ಸೆಕ್ಷನ್ ವಿಧಿಸಲಾಗಿದೆ.

ಮೇ 23 ರಂದು ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ನಡೆಯುತಲಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ತಯಾರಿ ನಡೆಸಲಾಗಿದೆ.  ಶಿವಮೊಗ್ಗದ 8 ವಿಧಾನಸಭಾ ಕ್ಷೇತ್ರಗಳ ಪೈಕಿ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಗಳಂತೆ, 112 ಟೇಬಲ್ ಗಳನ್ನು ಜೋಡಿಸಲಾಗಿದ್ದು, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಹಾಗೂ ಮೈಕ್ರೋ ಅಬ್ಸರ್ವರ್ ಗಳನ್ನು ನೇಮಿಸಲಾಗಿದ್ದು, 15 ಎಣಿಕೆ ಕೊಠಡಿಗಳಲ್ಲಿ ಮತ ಏಣಿಕೆ ನಡೆಯಲಿದೆ.

ಇನ್ನು ಮತ ಎಣಿಕೆ ಕಾರ್ಯ ನಡೆಯಲಿರುವ ಮೇ 23 ರಂದು ಬೆಳಿಗ್ಗೆ 6 ರಿಂದ ಮೇ 24 ರ ಬೆಳಿಗ್ಗೆ 6 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕಲಂ 144 ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸುವವರು ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿ, ಎಚ್ಚರಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments