Webdunia - Bharat's app for daily news and videos

Install App

ಇತಿಹಾಸ ಪ್ರಸಿದ್ದ ಕರಗಕ್ಕೆ ದಿನಗಣನೆ

Webdunia
ಭಾನುವಾರ, 26 ಮಾರ್ಚ್ 2023 (17:43 IST)
ಬೆಂಗಳೂರಿನಲ್ಲಿ ಈ ಬಾರಿ ಅದ್ದೂರಿ ಕರಗ ಉತ್ಸವ ನಡೆಯಲಿದೆ, ಇದೇ ಮಾರ್ಚ್ 29ಕ್ಕೆ ಕರಗ ಉತ್ಸವ ಆರಂಭವಾದರೆ ಬರೋಬ್ಬರಿ 11 ದಿನಗಳ ಕಾಲ ಅಂದರೆ ಏಪ್ರಿಲ್‌ 8ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ.
 
 ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವ ಅರಂಭದ ದಿನದಿಂದಲೂ ಇಲ್ಲಿಯವರೆಗೆ ದೇಶ ವಿದೇಶಗಳ ಸಾವಿರಾರು ಮಂದಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
 
ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ. ಜ್ಞಾನೇಂದ್ರ ಅವರು ಹೊರಲಿದ್ದಾರೆ. ''ಏಪ್ರಿಲ್‌ 6 ರಂದು ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಲ್ಲಿ ಕರಗ ನಡೆಯುತ್ತದೆ. ಅಂದು ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ, ಪ್ರತಿದಿನ ಬೆಳಗ್ಗೆ, ಸಂಜೆ ಕಾರ್ಯಕ್ರಮಗಳು ನಡೆಯಲಿವೆ. ಅದೇ ರೀತಿ ಮಾ.3ರಂದು ಆರತಿ, ಮಾ.4ರಂದು ಹಸಿಕರಗ, ಮಾ.5 ರಂದು ಪೊಂಗಲ್‌, 6ರಂದು ಕರಗ ಉತ್ಸವ ನಡೆಯಲಿದೆ. ಕರಗದ ನೆಪದಲ್ಲಿಈ ಬಾರಿ ಧರ್ಮರಾಯಸ್ವಾಮಿ ದೇವಸ್ಥಾನ ಬಡಾವಣೆ ಹಾಗೂ ಸುತ್ತಮುತ್ತಲಿನ ರಸ್ತೆಗಳಿಗೂ ಅಭಿವೃದ್ಧಿಯ ಭಾಗ್ಯ ದೊರೆಯಲಿದೆ.
 
 ಕರಗದಲ್ಲಿ ಗಮನ ಸೆಳೆಯುವ ಎರಡು ಪ್ರಮುಖ ಅಂಶಗಳಿವೆ. ಅವೆಂದರೆ, ಮಲ್ಲಿಗೆ ಹೂವು ಮತ್ತು ಮಹಿಳೆಯರಿಗೆ ನೀಡಿರುವ ಪ್ರಾಶಸ್ತ್ಯ. ಕರಗದ ಜತೆ ಅವಿಭಾಜ್ಯ ಸಂಬಂಧ ಹೊಂದಿರುವ ತಿಗಳರು ಪುಷ್ಪಕೃಷಿಯಲ್ಲಿ ಪರಿಣತರು. ಜತೆಗೆ ಚೈತ್ರ ಮಾಸದ ಸಮಯದಲ್ಲೇ ಮಲ್ಲಿಗೆ ಹೆಚ್ಚು ಕಂಡುಬರುತ್ತದೆ. ಈ ದುಂಡು ಮಲ್ಲಿಗೆಯ ಒತ್ತಾದ ದಂಡೆಗಳನ್ನು ವೀರಕುಮಾರರಿಗೆ ಮುಡಿಯಿಂದ ಹಾಕಲಾಗುತ್ತದೆ. ಜತೆಗೆ ದೇವಾನುದೇವತೆಗಳಿಗೂ ಮಲ್ಲಿಗೆಯನ್ನು ಬಿಟ್ಟು ಬೇರೆ ಹೂವುಗಳನ್ನು ಕರಗದಲ್ಲಿ ಬಳಸುವುದಿಲ್ಲ. ಇನ್ನು, ಇದು ಶಾಕ್ತಪಂಥದ ಆರಾಧನಾ ಕ್ರಮವಾದ್ದರಿಂದ ಶಕ್ತಿ ಸ್ವರೂಪಿಣಿಯಾದ ಸ್ತ್ರೀಗೆ ಹೆಚ್ಚಿನ ಮಹತ್ವ ಕೊಡಲಾಗಿದೆ. ಕರಗದ 11 ದಿನಗಳ ಕಾಲವೂ ಅರ್ಪಿಸಲಾಗುವ ಗಾವನ್ನ, ಪೊಂಗಲ್‌, ನೈವೇದ್ಯ ಇತ್ಯಾದಿಗಳನ್ನೆಲ್ಲವಹ್ನಿಕುಲ ಸಮುದಾಯದ ಹೆಂಗಳೆಯರೇ ಶ್ರದ್ಧೆಯಿಂದ ಸಿದ್ಧಪಡಿಸುತ್ತಾರೆ.
 
 ಕಳೆದ ಮೂರು ವರ್ಷಗಳಿಂದ ಕಳೆಗುಂದಿದ್ದ ಕರಗ ಶಕ್ತ್ಯೋತ್ಸವ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ.  ಹೀಗಾಗಿ ವಹ್ನೀ ಕುಲ ಕ್ಷತ್ರೀಯರ ಮನೆಗಳಲ್ಲಿ ಸಂತಸ ಮನೆ ಮಾಡಿದೆ. ನಗರದ ಧರ್ಮರಾಯ ಸ್ವಾಮಿ ದೇವಾಲಯ ಆವರಣವೂ ಕರಗ ಶಕ್ತ್ಯೋತ್ಸವಕ್ಕೆ ಸಿದ್ಧಗೊಳ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments