Webdunia - Bharat's app for daily news and videos

Install App

ಜು.20ರಿಂದ ದೇಶವ್ಯಾಪಿ ಲಾರಿ ಮುಷ್ಕರ

Webdunia
ಬುಧವಾರ, 18 ಜುಲೈ 2018 (16:14 IST)
ಕೇಂದ್ರ ಸರ್ಕಾರಕ್ಕೆ ಸರಕು ಸಾಗಣೆ ಉದ್ಯಮದಲ್ಲಿ ಸುಮಾರು ದಿನಗಳಿಂದ ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಸತತವಾಗಿ ಮನವಿ ಮಾಡಲಾಗಿದ್ದರೂ ಸಹ  ಇದುವರೆಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಜು.20ರಿಂದ ದೇಶವ್ಯಾಪಿ ಅನಿರ್ಧಿಷ್ಟಾವಧಿ ಕಾಲ ಸರಕು ಸಾಗಣೆದಾರರುಲಾರಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಹೀಗಂತ ಹುಬ್ಬಳ್ಳಿ-ಧಾರವಾಡ ಗೂಡ್ಸ್ ಟ್ರಾನ್ಸಪೋರ್ಟರ್ಸ್ ರ್ಸ್ ಆ್ಯಂಡ್ ಲಾರಿ ಓನರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಸೈಯದ್ ಸೈಪುಲ್ಲಾ ಖಾನ ತಿಳಿಸಿದ್ದಾರೆ.

ರಸ್ತೆ ಸಾರಿಗೆ ಉದ್ಯಮ ಸಾಮಾನ್ಯ ಜನರಿಗೆ ಅವಶ್ಯಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವುದಲ್ಲದೇ ದೇಶದ ಆರ್ಥಿಕ ಬೆನ್ನೆಲುಬಾಗಿ ಶ್ರಮಿಸುತ್ತಿದೆ. ಅಲ್ಲದೇ ಉದ್ಯೋಗ ಸೃಷ್ಟಿಯಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದೆ. ಹೀಗಿರುವಾಗ ರಸ್ತೆ ಸಾರಿಗೆ ಉದ್ಯಮವು ನೋಟು ರದ್ಧತಿ, ಸರಕು ಸೇವಾ ಕಾಯ್ದೆ ಜಾರಿ ಹಾಗೂ -ವೇ ಬಿಲ್ ವ್ಯವಸ್ಥೆ ಜಾರಿಗೊಳಿಸಿದಾಗಲೂ ಕೆಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದೆ. ಆದರೇ ಅವುಗಳಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಲ್ಲಿ ಇಂದಿಗೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ.

ನಿಟ್ಟಿನಲ್ಲಿ ಮುಷ್ಕರ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇಂಧನ ದರ ಇಳಿಕೆ, ರಾಷ್ಟ್ರವ್ಯಾಪಿ ಏಕರೂಪ ದರ ನಿಗದಿ, ತ್ರೈಮಾಸಿಕ ಪರಿಶೀಲನಾ ಪದ್ಧತಿ ಆಗ್ರಹಿಸಿ, ಟಿ.ಡಿ.ಎಸ್ ರದ್ದುಗೊಳಿಸುವುದು, ಪೂರ್ವಭಾವಿ ಆದಾಯ ಕಾಯ್ದೆ ಪರಿವರ್ತಿಸಲು ಆಗ್ರಹಿಸಿ ಹಾಗೂ ಇನ್ನು ಹಲವಾರು ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದೆಂದು ಲಾರಿ ಮಾಲಿಕರು ಮತ್ತು ಚಾಲಕರ ಸಂಘ ದವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments