Webdunia - Bharat's app for daily news and videos

Install App

ಪತ್ನಿ ಜತೆ ಸೇರಿ ಅತ್ತಿಗೆಯನ್ನು ಕೊಂದ!

Webdunia
ಮಂಗಳವಾರ, 1 ಮಾರ್ಚ್ 2016 (08:50 IST)
ಮೈದುನನೋರ್ವ ತನ್ನ ಹೆಂಡತಿಯ ಜತೆ ಸೇರಿ ಅತ್ತಿಗೆಯನ್ನೇ ಕೊಂದ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ. 
 
ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯ ಉಪ್ಪಿನಕುದ್ರು ಕಳಿವಿನಬಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಜ್ಯೋತಿ ಖಾರ್ವಿ (26) ಜತೆ ಜಗಳಕ್ಕಿಳಿದ ಗುರುರಾಘವೇಂದ್ರ (26), ಪತ್ನಿ ದಿವ್ಯಾ (19) ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. 
 
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ಮೃತ ಜ್ಯೋತಿ ಪತಿಯ ಮನೆಯ ಸಮೀಪವೇ ಇದ್ದ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಗುರುರಾಘವೇಂದ್ರ ಕ್ಷುಲ್ಲಕ ಕಾರಣಕ್ಕೆ ಏಕಾಏಕಿ ಜಗಳಕ್ಕೆ ಇಳಿದಿದ್ದಾನೆ. 
 
ಮಾತಿಗೆ ಮಾತು ಬೆಳೆದು ಕೊನೆಗೆ ಗುರು ಪತ್ನಿ ದಿವ್ಯಾ ಅತ್ತಿಗೆಯನ್ನು ಹಿಗ್ಗಾಮುಗ್ಗಾ ಥಳಿಸಲು ಆರಂಭಿಸಿದ್ದಾಳೆ. ಪತಿ ಗುರು ಸಹ ಅತ್ತಿಗೆಯ ಕುತ್ತಿಗೆಯನ್ನು ಅದುಮಿದ್ದಾನೆ. ಜ್ಯೋತಿಯ ಸಹೋದರರು ಮತ್ತು ಸ್ಥಳೀಯರು ಅವರನ್ನು ತಡೆದು ಗಾಯಗೊಂಡ ಜ್ಯೋತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
 
ಸಂಪೂರ್ಣ ಅಸ್ವಸ್ಥರಾದ ಜ್ಯೋತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ.ಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಸಾವನ್ನಪ್ಪಿದ್ದಾಳೆ. ಕಳೆದ ವರ್ಷ ಹೊಟ್ಟೆಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜ್ಯೋತಿಯ ಹೊಟ್ಟೆ ಭಾಗಕ್ಕೆ ಬಲವಾದ ಹೊಡೆತ ಬಿದ್ದ ಕಾರಣ ಆಕೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
 
ಕಳೆದ ಮೂರು ವರ್ಷಗಳ ಹಿಂದಷ್ಟೇ ಗುರು ಸಹೋದರ ವಿಜಯ್ ಜತೆ ಪ್ರೇಮ ವಿವಾಹವಾಗಿದ್ದ ಜ್ಯೋತಿ ತನ್ನ ಮೂರು ತಿಂಗಳ ಮಗು ಸತ್ತ ನೋವಿನಲ್ಲಿದ್ದರು. ಮಗಳನ್ನು ಕಳೆದುಕೊಂಡು ದುಃಖದಲ್ಲಿದ್ದ ವಿಜಯ್ ಈಗ ಪ್ರೀತಿಸಿ ಮದುವೆಯಾಗಿದ್ದವಳನ್ನು ಸಹ ಕಳೆದುಕೊಳ್ಳುವಂತಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments