ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಮೃತ ಯೋಧನ ಪತ್ನಿಯ ಎರಡೂ ಕೈಗಳು ಛಿದ್ರ

Sampriya
ಬುಧವಾರ, 20 ನವೆಂಬರ್ 2024 (15:20 IST)
Photo Courtesy X
ಬಾಗಲಕೋಟೆ: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಉಪಕರಣ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಎರಡು ಕೈಗಳು ಛಿದ್ರಗೊಂಡ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಶಿಕಲಾ ಎಂಬುವರ ಹೆಸರು, ನಂಬರ್ ಹೊಂದಿದ್ದ ಪಾರ್ಸಲ್ ಕೊರಿಯರ್‌ಯೊಂದು ಬಂದಿತ್ತು. ಶಶಿಕಲಾ ಅವರು ಮೃತ ಯೋಧನ ಪತ್ನಿಯಾಗಿದ್ದರು. ಕೊರಿಯರ್‌ನವರು ಶಶಿಕಲಾ ಅವರಿಗೆ ಕರೆ ಮಾಡಿದ್ದರು. ಆದರೆ, ಅವರು ಊರಲ್ಲಿ ಇರದ ಕಾರಣ ಬಸಮ್ಮನಿಗೆ ಕೊರಿಯರ್ ಅನ್ನು ಪಡೆದು ತೆಗೆದು ನೋಡಲು ತಿಳಿಸಿದ್ದರು.

ನಂತರ ಕೊರಿಯರ್‌ ತೆಗೆದು ನೋಡಿದಾಗ ಹೇರ್ ಡ್ರೈಯರ್ ಇತ್ತು. ಈ ವೇಳೆ ಪಕ್ಕದ ಮನೆಯವರು ಹೇರ್ ಡ್ರೈಯರ್ ಆನ್ ಮಾಡಲು ತಿಳಿಸಿದ್ದಾರೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಬ್ಲಾಸ್ಟ್ ಆಗಿ ಜೋರಾಗಿ ಸದ್ದಾಯಿತು.

ಬ್ಲಾಸ್ಟ್ ಆದ ಹಿನ್ನೆಲೆ ಎರಡೂ ಕೈಗಳು ತುಂಡಾಗಿದ್ದು, ಬೆರಳುಗಳು ಛಿದ್ರ ಛಿದ್ರವಾಗಿ ತುಂಡಾಗಿದೆ. ಮನೆಯಲ್ಲಿ ರಕ್ತ ಚಿಮ್ಮಿದ್ದು, ಬಸಮ್ಮನನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಅವರನ್ನು ವಿಚಾರಿಸಿದಾಗ ನಾನು ಹೇರ್ ಡ್ರೈಯರ್ ಆರ್ಡರ್ ಮಾಡೇ ಇಲ್ಲ. ಆದರೆ, ನನ್ನ ಹೆಸರಲ್ಲಿ ಹೇರ್ ಡ್ರೈಯರ್ ಬಂದಿದೆ. ಆರ್ಡರ್ ಮಾಡಿದವರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂದು ಪೊಲೀಸರಿಂದ ತನಿಖೆ ನಡೆದಿದೆ.

ಸದ್ಯ ಹೇರ್ ಡ್ರೈಯರ್ ವಿಶಾಖಪಟ್ಟಣದಲ್ಲಿ ಉತ್ಪಾದನೆಯಾಗಿದ್ದು, ಕೊರಿಯರ್ ಬಾಗಲಕೋಟೆಯಿಂದ ಬಂದಿದೆ ಎಂದು ತಿಳಿದು ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments