Select Your Language

Notifications

webdunia
webdunia
webdunia
webdunia

ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ

ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ
bangalore , ಮಂಗಳವಾರ, 9 ನವೆಂಬರ್ 2021 (20:56 IST)
ಬೆಂಗಳೂರು: ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ನಿವಾಸಿ ಪರ್ವಿದ್(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 8.5 ಲಕ್ಷ ರೂ ಮೌಲ್ಯದ ಎರಡು ಚಿನ್ನದ ಸರ, ಐದು ಮೊಬೈಲ್ ಫೋನ್, 4 ದ್ವಿಚಕ್ರವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನ ವಿರುದ್ಧ ತಿಲಕ್‌ನಗರ, ಮೈಕೋ ಲೇಔಟ್, ಯಶವಂತಪುರ, ಸಿದ್ದಾಪುರ, ಬಸವನಗುಡಿ, ಜಯನಗರ, ಸುದ್ದಗುಂಟೆಪಾಳ್ಯ ಸೇರಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಆರೋಪಿ ಪರ್ವಿದ್ ವಿರುದ್ಧ ಈ ಹಿಂದೆ ವಿವಿಧ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ ಮತ್ತೆ ಜಾಮೀನಿನ ಮೇಲೆ ಹೊರಬಂದು ಸರಗಳ್ಳತನಕ್ಕೆ ಇಳಿಯುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ