Webdunia - Bharat's app for daily news and videos

Install App

ಚಾಲಕರು ನಿರ್ವಾಹಕರಿಗೆ ಎಚ್ಚರಿಕೆ ನೀಡಿದ ನ್ಯಾಯಾಲಯ

Webdunia
ಸೋಮವಾರ, 25 ಅಕ್ಟೋಬರ್ 2021 (19:52 IST)
ನಿಲುಗಡೆ ಸ್ಥಳದಲ್ಲಿ ಬಸ್ ನಿಲ್ಲಿಸದೆ ತಮ್ಮ ಅನುಕೂಲಕ್ಕೆ ತಕ್ಕಂತೆ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ ತೊಂದರೆ ಕೊಡುವ ಚಾಲಕರು, ನಿರ್ವಾಹಕರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಗ್ರಾಹಕ ನ್ಯಾಯಾಲಯ ನೀಡಿರುವ ಪ್ರಕರಣವೊಂದರ ತೀರ್ಪು ಎಚ್ಚರಿಕೆ ನೀಡಿದೆ.ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಚಾಲಕ, ನಿರ್ವಾಹಕ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ದೂರುದಾರ ಮಹಿಳಾ ಗ್ರಾಹಕಿ ವಿಜಯ ಬಾಯಿ ಎಲï. ಅವರಿಗೆ 8,010 ರೂ. ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜುಗೆ ರಾಜ್ಯ ಗ್ರಾಹಕ ನ್ಯಾಯಾಲಯ ನಿರ್ದೇಶಿಸಿದೆ ಇದೀಗ ರಾಜ್ಯ ಗ್ರಾಹಕ ನ್ಯಾಯಾಲಯ ಜಿಲ್ಲಾ ಗ್ರಾಹಕ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದ್ದು, ಪರಿಹಾರ ಮೊತ್ತದಲ್ಲಿ 7,000 ರೂ ಕಡಿತ ಮಾಡಿ 8,010 ರೂ. ನೀಡುವಂತೆ ಆದೇಶಿಸಿದೆ. ಈ ಪ್ರಕರಣ ಸಾರಿಗೆ ಇಲಾಖೆ ಅಧಿಕಾರಿಗಳು, ನೌಕರರಿಗೆ ಪಾಠವೂ ಆಗಿದೆ. ವಿಜಯ ಬಾಯಿ ಪರ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಎಲ್ ವಾದ ಮಾಡಿದ್ದರು.
 
ಎಲ್ಲಾದರಲ್ಲಿ ಬಸ್ ನಿಲುಗಡೆ ಮಾಡುವ ಹಾಗೂ ಸೂಕ್ತ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಇರುವ ಚಾಲಕರಿಗೆ ಇದು ಪಾಠ ಎಂದೇ ಪರಿಗಣಿಸಲಾಗಿದೆ. ತುಮಕೂರಿನ ಈ ಉದಾಹರಣೆ ಇಡೀ ರಾಜ್ಯದ ಸರ್ಕಾರಿ ಬಸ್ ವ್ಯವಸ್ಥೆಯ ಪರಾಮರ್ಶೆಗೆ ಹಾಗೂ ಸುಧಾರಣೆಗೆ ದಾರಿಯಾಗಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments