Select Your Language

Notifications

webdunia
webdunia
webdunia
webdunia

ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಅನುಮತಿ

ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಅನುಮತಿ
ಬಳ್ಳಾರಿ , ಶುಕ್ರವಾರ, 30 ಸೆಪ್ಟಂಬರ್ 2016 (13:32 IST)
ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಇದೀಗ ಅವಕಾಶ ನೀಡಿದೆ.
 
ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಆದೇಶ ನೀಡುವವರೆಗೆ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು.
 
ಗಣಿಗಾರಿಕೆ ಆರೋಪಗಳ ಮೇಲೆ ಬಂಧಿತನಾಗಿ ಜೈಲಿನಿಂದ ಹೊರಬಂದು ಜಾಮೀನಿನಲ್ಲಿರುವ ರೆಡ್ಡಿ, ಸುಮಾರು ಮೂರು ವರ್ಷಗಳ ನಂತರ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
 
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ತಮ್ಮದೇ ಸಾಮ್ರಾಜ್ಯ ನಿರ್ಮಿಸಿಕೊಂಡಿದ್ದ ರೆಡ್ಡಿ ಸಹೋದರರಿಗೆ ಸಿಬಿಐ ಅವರನ್ನು ಬಂಧಿಸುವ ಮೂಲಕ ಶಾಕ್ ಕೊಟ್ಟಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಮಂಡಲದ ನಿರ್ಣಯವೇ ಪ್ರಮುಖ, ನ್ಯಾಯಾಂಗ ನಿಂದನೆಯಾಗಲ್ಲ: ಸಿಎಂ