Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್

Webdunia
ಮಂಗಳವಾರ, 15 ಫೆಬ್ರವರಿ 2022 (18:02 IST)
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ವಿಫಲರಾ ಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರಧಾನ ಅಭಿಯಂತರರಿಗೆ ಹೈಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.ಹೈಕೋರ್ಟ್ ವಿಭಾಗೀಯ ಪೀಠವು ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯದ ವಿಭಾಗದ ಮುಖ್ಯ ಅಭಿಯಂತರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
 
ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆಗೆ ಸಂಬಂಸಿದ ಸಾರ್ವಜನಿಕ ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯದ ವಿಭಾಗದ ಮುಖ್ಯ ಅಭಿಯಂತರು ಫೆ.7ರಂದು ಖುದ್ದು ಹಾಜರಾಗಲು ಸೂಚಿಸಿತ್ತು. ಇದೀಗ ವಿಚಾರಣೆಗೆ ಹಾಜರಾಗಲು ವಿಫಲವಾಗಿರುವ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಿದೆ. ಅಲ್ಲದೆ, ಈ ವೇಳೆ ಪಾಲಿಕೆ ಪರ ವಕೀಲರು ಹಾಜರಾತಿಗೆ ವಿನಾಯಿತಿ ಕೋರಿದರು.
 
ಆದರೆ, ಹಾಜರಾತಿಗೆ ವಿನಾಯಿತಿ ಕೋರುವ ರೀತಿ ಇದಲ್ಲ. ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಅರ್ಜಿ ಸಲ್ಲಿಸಿ ಮನವಿ ಮಾಡಬೇಕು. ಪ್ರಕರಣದ ವಿಚಾರಣೆ ಆರಂಭವಾದಾಗ ವಿನಾಯಿತಿ ಕೋರುವುದಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಬಳಿಕ ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯದ ವಿಭಾಗದ ಮುಖ್ಯ ಅಭಿಯಂತರ ವಿರುದ್ಧ ವಾರಂಟ್ ಧಿರಿಗೊಳಿಸಿ ಫೆ.17ಕ್ಕೆ ವಿಚಾರಣೆಯನ್ನು ಪೀಠ ಮುಂದೂಡಿತು.
 
ಪ್ರಧಾನ ಅಭಿಯಂತರರನ್ನು ಕೋರ್ಟ್ ಮುಂದೆ ಹಾಜರುಪಡಿಸಲು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದು, ಇದಕ್ಕಿಂತ ಕಠಿಣ ಆದೇಶ ಹೊರಡಿಸಲು ಹಿಂದೇಟು ಹಾಕುವುದಿಲ್ಲ. ಜಾಮೀನು ರಹಿತ ವಾರಂಟ್ ಜಾರಿಗೊಳಿಸುವುದು ನಮಗೆ ಕಷ್ಟವಲ್ಲ ಎಂದೂ ಪೀಠ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮುಂದಿನ ಸುದ್ದಿ
Show comments