Select Your Language

Notifications

webdunia
webdunia
webdunia
webdunia

ಕೆ. ಎಸ್. ಎಲ್. ಯು. ಕಾನೂನು ಪರೀಕ್ಷೆಗೆ ತಡೆಯಜ್ಞೆ

ಕೆ. ಎಸ್. ಎಲ್. ಯು. ಕಾನೂನು ಪರೀಕ್ಷೆಗೆ ತಡೆಯಜ್ಞೆ
ಬೆಂಗಳೂರು , ಶನಿವಾರ, 13 ನವೆಂಬರ್ 2021 (14:18 IST)
ಮಹತ್ವದ ಬೆಳವಣಿಗೆಯಲ್ಲಿ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
 
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ) ಆರಂಭವಾಗ ಬೇಕಿದ್ದ ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ ಆದೇಶ ಹೊರಡಿಸಿದೆ.ಕರ್ನಾಟಕ ಕಾನೂನು ವಿವಿ ಪದೇ ಪದೇ ತನ್ನ ಅಧಿಸೂಚನೆಗಳನ್ನು ಹೊರಡಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಸೃಷ್ಟಿ ಮಾಡಿತ್ತು, ಅಷ್ಟೇ ಅಲ್ಲದೆ ಈ ಹಿಂದೆ ತನ್ನ ಅಕಾಡಿಮಿಕ್ ಕ್ಯಾಲೆಂಡರ್ ಪ್ರಕಾರ ನಡೆದುಕೊಳ್ಳದೆ ವಿಳಂಬ ನೀತಿಯನ್ನು ಅನುಸರಿಸಿತ್ತು, ಈಗ ವಿದ್ಯಾರ್ಥಿಗಳು ಕಾನೂನು ವಿವಿಯ ನಡೆಯನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವ ಮೂಲಕ ತಡೆಯಾಜ್ಞೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಯಿ ಚಿನ್ನಕೆ ಮಗಳು ಕನ್ನ