Webdunia - Bharat's app for daily news and videos

Install App

ಮೈಸೂರು ಶಾಸಕ ರಾಮದಾಸ್ ಗೆ ಮತ್ತೆ ಸಂಕಷ್ಟ

Webdunia
ಭಾನುವಾರ, 8 ಆಗಸ್ಟ್ 2021 (21:09 IST)
ಮಳಲವಾಡಿ ಭೂ ಹಗರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಿದೆ. ಈ ಮೂಲಕ ಮೈಸೂರು ಶಾಸಕ ಎಸ್.ಎ. ರಾಮದಾಸ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ.
2008ರಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಭೂ ಹಗರಣ ಸಂಬಂಧ ರಾಮದಾಸ್ ವಿರುದ್ಧ ದಾಖಲಾಗಿದ್ದ ಪ್ರಕರಣ ಕುರಿತು ಪೊಲೀಸರು ಬಿ ವರದಿ ಸಲ್ಲಿಸಿದ್ದರು. ಪೊಲೀಸರ ವರದಿಯನ್ನು ಕೆಳ ನ್ಯಾಯಾಲಯ ಪುರಸ್ಕರಿಸಿತ್ತು.
ಕೆಳ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದು, ಅಷ್ಟರಲ್ಲೇ ರಾಮದಾಸ್ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಭೂಹರಣದ ಬಗ್ಗೆ ತನಿಖೆ ನಡೆಸಿ ರಾಮದಾಸ್ ವಿರುದ್ಧ ಅಂದಿನ ಮೈಸೂರು ಡಿಸಿ ತ.ಮ. ವಿಜಯಭಾಸ್ಕರ್ ವರದಿ ಸಲ್ಲಿಸಿದ್ದರು.
ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವರ್ಗಾವಣೆಯಾಗಿದ್ದು, ಸೆಕ್ಷನ್ 420, 468 ಅಡಿ ಕೇಸ್ ದಾಖಲಿಸಲು 2019ರಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ವಿಶೇಷ ಕೋರ್ಟ್ ಆದೇಶಿಸಿತ್ತು. ವಿಶೇಷ ಕೋರ್ಟ್ ನ ಆದೇಶ ಪ್ರಶ್ನಿಸಿ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದ ರಾಮದಾಸ್ ತಂದಿದ್ದು, ಇತ್ತೀಚೆಗೆ ರಾಮದಾಸ್ ಅರ್ಜಿಯನ್ನು ವಜಾ ಮಾಡಿ, ತಡೆಯಾಜ್ಞೆ ತೆರವು ಮಾಡಿದ್ದ ಹೈಕೋರ್ಟ್, ಮತ್ತೆ ವಿಚಾರಣೆ ಮುಂದುವರಿಸಲು ನಿರ್ಧರಿಸಿದ್ದು, ಶಾಸಕ ರಾಮದಾಸ್ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments