Publish Date: Fri, 20 May 2022 (20:57 IST)
Updated Date: Fri, 20 May 2022 (20:59 IST)
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹಲವು ಹಗರಣದ ಆರೋಪಗಳು ರೋಹಿಣಿ ಸಿಂಧೂರಿ ವಿರುದ್ಧ ಇದ್ದು ತನಿಖೆಗೆ ರಾಜ್ಯ ಸರಕಾರ ಆದೇಶಿದೆ. ಮಾತ್ರವಲ್ಲ ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ನೇಮಕ ಮಾಡಲಾಗಿದೆ. ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರಕಾರ ಆದೇಶಿಸಿದೆ..ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ , ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸ್ವೀಮಿಂಗ್ ಪೂಲ್ ಹಾಗೂ ಜಿಮ್ ನಿಂದ ಪಾರಂಪರಿಕ ಕಟ್ಟಡಕ್ಕೆ ಹಾನಿ ಆರೋಪ, ಕರೋನಾ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆಯನ್ನ ಮುಚ್ಚಿಟ್ಟ ಆರೋಪ. ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣದ ಆರೋಪ ಸಿಂಧೂರಿ ಮೇಲಿದೆ.