Webdunia - Bharat's app for daily news and videos

Install App

ಮೂವರನ್ನ ಹತ್ಯೆಗೈದ ಯೋಧನಿಗೆ ಕೋರ್ಟ್‍ನಿಂದ ಜೀವಾವಧಿ ಶಿಕ್ಷೆ

Webdunia
ಶುಕ್ರವಾರ, 10 ಡಿಸೆಂಬರ್ 2021 (16:02 IST)
ಆಸ್ತಿ ಕಲಹದ ಹಿನ್ನೆಲೆಯಲ್ಲಿ 11 ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣದ ಅಪರಾಧಿ(ಸಿಆರ್‍ಪಿಎಫ್ ಯೋಧ) ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಧಾರವಾಡ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
ಕುಂದಗೋಳ ತಾಲೂಕಿನ ಬೆಟದೂರ ಗ್ರಾಮದ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ, ಅಪರಾಧಿಗೆ ಶಿಕ್ಷೆ ಪ್ರಕಟಿಸಿದೆ. 
2010ರಲ್ಲಿ ಮದುವೆಯಾಗಿದ್ದ ಶಂಕ್ರಪ್ಪ ತಿಪ್ಪಣ್ಣ ಮತ್ತು ಪತ್ನಿ ನಡುವೆ ಜಗಳ ನಡೆದಿದ್ದು, ಹೆಂಡತಿ ತವರು ಸೇರಿದ್ದಳು. ಸಂಬಂಧಿಕರಾದ ಯಲ್ಲಪ್ಪ ಭಜಂತ್ರಿ, ಪತ್ನಿ ಜಗಳ ಮಾಡಿ ತವರು ಸೇರಲು ಕಾರಣ ಎಂದು ಭಾವಿಸಿದ ಯೋಧ, ತಾಯಿಯ ಆಸ್ತಿಯನ್ನು ತನ್ನ ಹೆಸರಿಗೆ ಬರುವಂತೆ ಮಾಡಲು ಸಂಬಂಧಿಗಳು ಸಹಕರಿಸಲಿಲ್ಲ ಎಂಬ ದ್ವೇಷದಿಂದ ಬೆಟದೂರು ಗ್ರಾಮದ ಯಲ್ಲಪ್ಪ ಭಜಂತ್ರಿ (38), ಮಕ್ಕಳಾದ ಸೋಮಪ್ಪ ಭಜಂತ್ರಿ (11), ಐಶ್ವರ್ಯ ಭಜಂತ್ರಿ (9)ಗೆ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿ ಮದನಕುಮಾರ ಎಂಬಾತನನ್ನು ಗಾಯಗೊಳಿಸಿದ್ದ. ಈ ವೇಳೆ ಯಲ್ಲಪ್ಪನ ಹೆಂಡತಿ ಗೀತಾ ಗುಂಡೇಟಿನಿಂದ ಪಾರಾಗಿದ್ದಳು.
ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ದೇವಂದ್ರಪ್ಪ ಎನ್. ಬಿರಾದಾರ ಅಪರಾಧಿಗೆ 24 ವರ್ಷ ಕಠಿಣ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments