ಕ್ಷಮೆ ಕೇಳುವ ಸೌಜನ್ಯ ಡಿಕೆಶಿ, ಸಿದ್ದುಗಿಲ್ಲ- ಈಶ್ವರಪ್ಪ..!

Webdunia
ಶುಕ್ರವಾರ, 19 ಆಗಸ್ಟ್ 2022 (18:12 IST)
ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ವಿಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿದ್ದಾರೆ. ನಾವು ತಪ್ಪು ಮಾಡಿದರೆ ಅವರು ತಿದ್ದುವ ಪ್ರಯತ್ನ ಮಾಡಬೇಕು. ಅವರು ತಪ್ಪು ಮಾಡಿದರೆ ಅವರಿಗೆ ನಾವು ಹೇಳುವ ಪ್ರಯತ್ನ ಮಾಡ್ತೇವೆ, ಇದೇ ರಾಜಕಾರಣ ಎಂದರು. ಈ ಬಗ್ಗೆ ಸಿಎಂ ಹಾಗೂ ಯಡಿಯೂರಪ್ಪ ಈ ರೀತಿ ಮಾಡಬೇಡಿ ಅಂತಾ ಹೇಳಿದ್ದಾರೆ. ಹೀಗಾಗಿ ನಾನೇನು ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ರಾಜಕಾರಣ ಅಂದ ಮೇಲೆ ಟ್ವೀಟ್ ವಾರ್ ನಡೆಯುತ್ತದೆ. ಎದುರೆದುರು ಟೀಕೆ ಮಾಡಿಕೊಳ್ಳುತ್ತೇವೆ.
ಒಬ್ಬರಿಗೊಬ್ಬರು ಹೊಗಳಿಕೊಳ್ಳಲು ರಾಜಕಾರಣ ಅಂದ್ರೆ ಏನು? ನಾವು ಅವರಿಗೆ ಬೈಯುವುದು, ಅವರು ನಮಗೆ ಬೈಯುವುದು ಇದೇ ರಾಜಕಾರಣ. ನಾವು ಮಾಡಿದ ಕೆಲಸವನ್ನೆಲ್ಲಾ ಹೊಗಳುತ್ತಾರಾ ಅವರು. ಅವರು ಮಾಡಿದ ಕೆಲಸವನ್ನೆಲ್ಲಾ ನಾವು ಹೊಗಳಿದ್ದೇವಾ....? ಆಡಳಿತ ದೃಷ್ಟಿಯಿಂದ ಒಳ್ಳೆಯದನ್ನ ಟೀಕಿಸಿದರೆ ತೆಗೆದುಕೊಳ್ಳುತ್ತೇವೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಗಂಡ ಸಾವರ್ಕರ್ ಪೋಟೋ ಹರಿದು ಹಾಕಿರೋದು ನೇರವಾಗಿ ಕಾಣ್ತಿದೆ. ಇದು ಗೊತ್ತಿದ್ದರೂ ಒಂದು ಕ್ಷಮೆ ಕೇಳುವ ಸೌಜನ್ಯ ಡಿಕೆಶಿ, ಸಿದ್ದರಾಮಯ್ಯ ಅವರಿಗಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments