Webdunia - Bharat's app for daily news and videos

Install App

ಕೋವಿಡ್ ಲಾಕ್ ಡೌನ್ ಶಿಸ್ತು

Webdunia
ಬುಧವಾರ, 5 ಜನವರಿ 2022 (15:04 IST)
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್‌ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.
 
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಆಸನಗಳಿವೆಯೋ ಅಷ್ಟೇ ಜನರ ಪ್ರಯಾಣಕ್ಕೆ ಮಾತ್ರ ಅವಕಾಶವನ್ನು ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments