ಬಿಎಸ್ ಯಡಿಯೂರಪ್ಪ, ಶ್ರೀರಾಮುಲು ಕೊರೋನಾ ಕಾಲದ ಅಕ್ರಮ ಇಂಚಿಂಚೂ ಬಯಲು

Krishnaveni K
ಶನಿವಾರ, 9 ನವೆಂಬರ್ 2024 (13:07 IST)
ಬೆಂಗಳೂರು: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೊರೋನಾ ಹಗರಣದ ಬಗ್ಗೆ ಡಿ ಕುನ್ನಾ ಆಯೋಗ ಇಂಚಿಂಚೂ ಬಯಲು ಮಾಡಿದೆ. ಜೊತೆಗೆ ಆಗ ಸಿಎಂ ಆಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಸಲಹೆ ನೀಡಿದೆ.

ಕೊರೋನಾ ಹಗರಣದ ಬಗ್ಗೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಜಸ್ಟಿಸ್ ಕುನ್ನಾ ಆಯೋಗದಿಂದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಕೊರೋನಾ ಕಾಲದ ಕೆಲವು ಕಡತಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಕೆ ಮಾಡಲಾಗಿದೆ. ಜೊತೆಗೆ ಯಡಿಯೂರಪ್ಪ ಮತ್ತು ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಸಲಹೆ ನೀಡಲಾಗಿದೆ.

ಪಿಪಿಇ ಕಿಟ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿತ್ತು ಎಂದು ಕಂಡುಬಂದಿದೆ. ಪಿಪಿಇ ಕಿಟ್ ಖರೀದಿಯಲ್ಲಿ ಪೂರೈಕೆದಾರರಿಗೆ ಅನಗತ್ಯವಾಗಿ 14.2 ಕೋಟಿ ರೂ. ಲಾಭ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚೀನಾದಿಂದ ಮತ್ತು ದೇಶೀಯವಾಗಿ ಹೆಚ್ಚಿನ ಬೆಲೆಗೆ ಪಿಪಿಇ ಕಿಟ್ ಖರೀದಿ ಮಾಡಲಾಗಿತ್ತು ಎಂದು ಆಯೋಗ ಹೇಳಿದೆ.

ಸ್ಥಳೀಯ ಮಾರುಕಟ್ಟೆಗಳಿಂದ 446 ರೂ. ಗೆ ಖರೀದಿ ಮಾಡಿದ್ದ ಪಿಪಿಇ ಕಿಟ್ ಗಳನ್ನು ಚೀನಾ ಕಂಪನಿಗಳನ್ನು 2117 ರೂ. ಗೆ ಪಿಪಿಇ ಕಿಟ್ ಖರೀದಿ ಮಾಡಲಾಗಿತ್ತು. ಒಂದೇ ಮಾದರಿಯ ಪಿಪಿಇ ಕಿಟ್ ಬೆಲೆಗೆ ಇಷ್ಟೊಂದು ವ್ಯತ್ಯಾಸವಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದೀಗ ಶ್ರೀರಾಮುಲು ಆರೋಗ್ಯ ಮಂತ್ರಿಗಳಾಗಿದ್ದಾಗ ಕಡತಗಳ ಪರಶೀಲನೆ ಮಾತ್ರ ನಡೆದಿದೆ. ಇನ್ನು, ಡಾ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಮಾಡಿದ್ದ ವ್ಯವಹಾರಗಳ ಕಡತಗಳ ತನಿಖೆಯಾಗಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments