Webdunia - Bharat's app for daily news and videos

Install App

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

Sampriya
ಭಾನುವಾರ, 25 ಮೇ 2025 (12:48 IST)
ಬೆಂಗಳೂರು: ದೇಶದಲ್ಲಿ ಕೋವಿಡ್‌ ಮಹಾಮಾರಿಯ ಮತ್ತೆ ಆತಂಕ ಹೆಚ್ಚುತ್ತಿದೆ. ನೆರೆಯ ರಾಜ್ಯದಲ್ಲಿ ಕಾಣಿಸಿಕೊಂಡಿದ್ದ ಸೋಂಕು ರಾಜ್ಯದಲ್ಲೂ ಮತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಶನಿವಾರ 85 ವರ್ಷದ ವೃದ್ಧರೊಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಯಲ್ಲಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಇಂದಿನ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಲಿದೆ.

ಕೋವಿಡ್ ಪ್ರಕರಣಗಳ ಏರಿಕೆಯನ್ನು ಗಮನಿಸಿ, ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೊತೆಗೆ ಎಂಟು ಆರ್ ಟಿಪಿಸಿಆರ್ ಟೆಸ್ಟಿಂಗ್ ಲ್ಯಾಬ್ ಗಳನ್ನು ಮತ್ತೆ ಓಪನ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ಶನಿವಾರದವರೆಗೆ 35 ಕೋವಿಡ್ ಕೇಸ್ ದಾಖಲಾಗಿದೆ. ದೇಶದಲ್ಲಿ 257 ಪ್ರಕರಣಗಳು ದಾಖಲಾಗಿದೆ. ಹೆಚ್ಚುತ್ತಿರುವ ಪ್ರಕರಣಗಳ ಭೀತಿಯಿಂದ ಆಯ್ದಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  

ಮಾಸ್ಕ್ ಧರಿಸಿ​: ಕೋವಿಡ್ ಬಂದವರಿಗೆ ಸಣ್ಣ ಪ್ರಮಾಣದಲ್ಲಿ ರೋಗ ಲಕ್ಷಣಗಳಿದ್ದು, ಗಂಭೀರವಾದ ಸಮಸ್ಯೆಗಳು ಏನೂ ಇಲ್ಲ. ಪ್ರಕರಣಗಳು ತಮ್ಮ‌ಮನೆಯಲ್ಲೇ ಉಳಿಯಬೇಕು. ಬಾಣಂತಿಯರು ಹೆಚ್ಚು ಜಾಗ್ರತೆಯಿಂದ ಇರ್ಬೇಕು ಎಲ್ಲರೂ ಮಾಸ್ಕ್ ಧರಿಸಬೇಕು. ಆದರೆ, ಯಾರು ಭಯ ಪಡುವುದು ಬೇಡ, ಅನಾವಶ್ಯಕವಾಗಿ ಸದ್ಯಕ್ಕೆ ಭಯ ಬೇಡ. ಮಾಸ್ಕ್ ಧರಿಸಿದರೆ ನಮಗೆ ಒಳ್ಳೆಯದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.  

ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ, ಸ್ಯಾನಿಟೈಸರ್ ಬಳಸಿ. ಊರುಗಳಿಗೆ ಓಡಾಡುವುದಕ್ಕೆ ತೊಂದರೆಯಿಲ್ಲ. ಜನರಲ್ಲಿ ಬೇಕಾದರೆ ಜಾಗೃತಿ ಮೂಡಿಸಿ. ನಾವು ಟೆಸ್ಟಿಂಗ್ ಕಿಟ್ ತೆಗೆದಿರಿಸಿದ್ದೇವೆ ಮತ್ತು ಟೆಸ್ಟ್ ಮಾಡಲೇಬೇಕಾದ ಟೆಸ್ಟ್ ಮಾಡುತ್ತೇವೆ. ಜ್ವರ ಬಂದವರು ತಮ್ಮ‌ಮನೆಯಲ್ಲೇ ಕಡಿಮೆಯಾಗುವವರೆಗೂ ಹೊರಬರಬೇಡಿ. ಕೋವಿಡ್‌ ಪ್ರಕರಣಗಳು ಅಷ್ಟೇನು ಗಂಭೀರ ಅಲ್ಲ, ಯಾರೂ ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ.

ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
* ಗರ್ಭಿಣಿಯರು, ಮಕ್ಕಳು ಹಾಗೂ ಕಾಮಾರ್ಬಿಟ್ ರೋಗಿಗಳು ಮುಂಜಾಗೃತ ಕ್ರಮವಹಿಸುವುದು ಸೂಕ್ತ
* ಜನನಿಬಿಡ ಪ್ರದೇಶದಲ್ಲಿ ಓಡಾಡುವಾಗ ಮಾಸ್ಕ್ ಧರಿಸುವುದು ಒಳ್ಳೆಯದು
* ಸ್ಯಾನಿಟೈಸ್, ಸ್ವಚ್ಛತೆ ಬಗ್ಗೆ ಸಾರ್ವಜನಿಕರು ಹೆಚ್ಚಿನ ಗಮನ ಹರಿಸಬೇಕು
* ರೋಗ ಗುಣ ಲಕ್ಷಣಗಳು ಇರುವವರು ಕೂಡಲೇ ಕೊರೊನಾ ಟೆಸ್ಟ್ ಮಾಡಿಸುವಂತೆ ಸೂಚನೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments