Webdunia - Bharat's app for daily news and videos

Install App

"ಅಕ್ಟೋಬರ್ ಅಂತ್ಯದೊಳಗೆ ರಾಜ್ಯದಲ್ಲಿ ಎಲ್ಲರಿಗೂ ಕೋವಿಡ್ ಲಸಿಕೆ"

Webdunia
ಭಾನುವಾರ, 19 ಸೆಪ್ಟಂಬರ್ 2021 (13:29 IST)
ಬೆಂಗಳೂರು, ಸೆ.19 :  ಅಕ್ಟೋಬರ್ ಅಂತ್ಯದೊಳಗೆ ಎಲ್ಲರಿಗೂ ಕೋವಿಡ್ ಮೊದಲನೆ ಡೋಸ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ನಡೆದ ಮಹಾ ಲಸಿಕಾ ಅಭಿಯಾನದಲ್ಲಿ ರಾಜ್ಯದಲ್ಲಿ 31.60 ಲಕ್ಷ ಮಂದಿಗೆ ಲಸಿಕೆ ನೀಡಿ ದಾಖಲೆ ನಿರ್ಮಿಸಲಾಗಿದೆ.
10 ಲಕ್ಷ ಜನಸಂಖ್ಯೆಗೆ ಹೋಲಿಸಿದರೆ ದೇಶದಲ್ಲೇ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ನಮ್ಮದಾಗಿದೆ. ಡಿ.15ರೊಳಗೆ ಎರಡು ಡೋಸ್ ಲಸಿಕೆಯನ್ನು ಎಲ್ಲರಿಗೂ ನೀಡುವ ಗುರಿ ಇದ್ದು, ವರ್ಷಾಂತ್ಯದೊಳಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.
ಕಾಂಗ್ರೆಸ್ಗೆ ಯಾವುದೇ ಬದ್ಧತೆ ಇಲ್ಲ. ಜನರ ಆರೋಗ್ಯದ ವಿಚಾರದಲ್ಲೂ ರಾಜಕಾರಣ ಮಾಡುವುದು ನೀಚತನ. ಲಸಿಕೆ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರು ಎಂದು ಆರೋಪಿಸಿದರು.
ಋತುಮಾನ ಆಧಾರಿತ ಜ್ವರ ಕಾಣಿಸಿಕೊಂಡಿರುವುದನ್ನು ಸೂಕ್ಷ್ಮವಾಗಿ ಗಮನಿಸಿ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಯಾವುದೇ ಆತಂಕ ಸದ್ಯಕ್ಕೆ ಸೃಷ್ಟಿಯಾಗಿಲ್ಲ. ಎಲ್ಲ ರೀತಿಯ ಚಟುವಟಿಕೆಗಳು ಪ್ರಾರಂಭವಾಗಿರುವುದರಿಂದ ಜ್ವರದ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳಿಗೆ ಲಸಿಕೆ ಕಂಡುಹಿಡಿಯುವ ಸಂಶೋಧನೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಲಸಿಕೆ ಕೊಡುವ ಸಾಧ್ಯತೆಗಳಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments