ಗೋಹತ್ಯೆ ಮಾಡಲು ಅವಕಾಶ ನೀಡಲ್ಲ : ಬಜರಂಗದಳ ಎಚ್ಚರಿಕೆ

Webdunia
ಬುಧವಾರ, 28 ಜೂನ್ 2023 (13:49 IST)
ಮಂಗಳೂರು : ಕರಾವಳಿಯಲ್ಲಿ ಮತ್ತೆ ಗೋಹತ್ಯೆ ವಿರುದ್ಧ ಹೋರಾಟಕ್ಕೆ ಹಿಂದೂ ಸಂಘಟನೆಗಳು ಸಜ್ಜಾಗಿವೆ. ಬಕ್ರೀದ್ ಸಂದರ್ಭದಲ್ಲಿ ಈ ಬಾರಿ ಅಕ್ರಮ ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ ನಾಯಕರು ಎಚ್ಚರಿಕೆ ನೀಡಿದ್ದಾರೆ.
 
ಮುಸ್ಲಿಮರು ತಮ್ಮ ಪವಿತ್ರ ಹಬ್ಬ ಬಕ್ರೀದ್ ಆಚರಣೆ ಸಂದರ್ಭದಲ್ಲಿ ಕುರ್ಬಾನಿ ಹೆಸರಲ್ಲಿ ಪ್ರಾಣಿಗಳನ್ನು ಬಲಿ ಕೊಡುತ್ತಾರೆ. ಕೆಲವು ಕಡೆ ಇದಕ್ಕೆ ಕುರಿ- ಆಡುಗಳನ್ನು ಬಳಸಿದರೆ, ಇನ್ನೂ ಕೆಲವು ಕಡೆ ಕೋಣ, ದನಗಳನ್ನು ವಧೆಗೆ ಬಳಸುತ್ತಾರೆ. ಆದರೆ ಗೋವುಗಳನ್ನು ಕುರ್ಬಾನಿ ಹೆಸರಲ್ಲಿ ಕಡಿಯುವುದಕ್ಕೆ ಹಿಂದೂ ಸಂಘಟನೆಗಳ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕರಾವಳಿಯಲ್ಲಿ ಪ್ರಬಲವಾಗಿರುವ ಬಜರಂಗದಳ ನಾಯಕರು, ಈ ಬಾರಿ ಗೋವುಗಳ ಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆಅಕ್ರಮ ಗೋಸಾಗಣೆ, ಹತ್ಯೆ ನಡೆಸಿದ್ದಲ್ಲಿ ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸುತ್ತೇವೆ ಎಂದು ಬಜರಂಗಳದ ದ.ಕ ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ ಹೇಳಿದ್ದಾರೆ. 

ಪ್ರಾಣಿಗಳನ್ನು ಬಲಿ ಕೊಡಲೇಬೇಕು ಎಂದಿದ್ದರೆ, ಆಡು, ಕುರಿಗಳನ್ನು ಬಳಸಿ. ಹಿಂದೂಗಳ ಪೂಜನೀಯ ಸ್ಥಾನದಲ್ಲಿರುವ ಗೋವುಗಳನ್ನು ಬಲಿ ಕೊಡಬೇಡಿ ಎಂದು ಬಜರಂಗದಳ ನಾಯಕರು ಹೇಳಿದ್ದಾರೆ. ಆದರೆ ಆಹಾರ ನಮ್ಮ ಹಕ್ಕು ಎನ್ನುವುದು ಮುಸ್ಲಿಮರ ಪ್ರತಿಪಾದನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments