Webdunia - Bharat's app for daily news and videos

Install App

ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಕು – ಪ್ರಿಯಾಂಕ್ ಖರ್ಗೆ

Webdunia
ಬುಧವಾರ, 30 ನವೆಂಬರ್ 2022 (19:59 IST)
ಗೋಹತ್ಯೆ ನಿಷೇಧ ಕಾಯ್ದೆಯಿಂದ ರಾಜ್ಯಕ್ಕೆ 5,280 ಕೋಟಿ ಆರ್ಥಿಕ ಹೊಣೆ ಆಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಈ ಕುರಿತು ಕೆಪಿಸಿಸಿ ಕಛೇರಿಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿ ಕಳೆದ ವರ್ಷ ಜನವರಿಯಲ್ಲಿ ಕ್ರಾಂತಿ ಕಾರಿ ವಿಧೇಯಕ ತಂದಿದ್ರು ಅದು ಗೋ ಹತ್ಯೆ ನಿಷೇಧ ಕಾಯ್ದೆ.ಕೇಸರಿ ಶಾಲು,ಜೈಕಾರ ಕೂಗಿ ಬಿಲ್ ಪಾಸ್ ಮಾಡಿದ್ರು ಈ ವಿಧೇಯಕ ರೈತರಿಗೆ, ಕಾರ್ಮಿಕರಿಗೆ ಉದ್ಯಮಿಗಳಿಗೆ ಎಷ್ಟು ಲಾಭ ಆಯ್ತು.ಇದರ ಬಗ್ಗೆ ಯಾರ ಯೋಚನೆ ಮಾಡಲೇ ಇಲ್ಲ.ಈ  ಕಾಯ್ದೆಯಿಂದ 5,280 ಕೋಟಿ ಆರ್ಥಿಕ ಹೊಣೆ ರಾಜ್ಯಕ್ಕೆ ಆಗುತ್ತಿದೆ. 500 ಕೋಟಿ ಇದ್ದ ಲೆದರ್ ಇಂಡಸ್ಟ್ರಿ ಆದಾಯ 166.74 ಕೋಟಿಗೆ ಇಳಿಕೆಯಾಗಿದೆ. ಲೆದರ್ ಕಾರ್ಖಾನೆಗಳಲ್ಲಿ 3.5 ಲಕ್ಷ  ಕಾರ್ಮಿಕರು‌ ಇದ್ದಾರೆ.ಅವರೆಲ್ಲರೂ ಬೀದಿಗೆ ಬಂದಿದ್ದಾರೆ, ಇದಕ್ಕೆ ಪರ್ಯಾಯ ವ್ಯವಸ್ಥೆ ಸರ್ಕಾರ ಮಾಡಿದ್ಯಾ?. ಹಣಕಾಸು ಇಲಾಖೆ ಈ ಕಾಯ್ದೆ ಜಾರಿಯ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡುವಂತೆ ಕೋರಿತ್ತು, ಆರ್ಥಿಕ ಪರಿಸ್ಥಿತಿ ಹಾಗೂ ಪರಿಣಾಮಗಳ ಕಾರಣದಿಂದ ಹಣಕಾಸು ಇಲಾಖೆ ಈ ಎಚ್ಚರಿಕೆ ನೀಡಿತ್ತು. ಆದ್ದರಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments