Webdunia - Bharat's app for daily news and videos

Install App

ಅಧ್ಯಕ್ಷ ಡಿಕೆ ಶಿವಕುಮಾರ್ ನ್ನ ಲೇವಡಿ ಮಾಡಿದ ಸಚಿವ ಸಿಪಿ ಯೋಗೀಶ್ವರ್

Webdunia
ಗುರುವಾರ, 8 ಜುಲೈ 2021 (18:11 IST)
ನಮ್ಮ ಬಿಜೆಪಿ ಪಕ್ಷಕ್ಕೆ ಎಲ್ಲಿಂದಲ್ಲೋ ಬಂದವರನ್ನು ನಾವು ಸೇರಿಸಿಕೊಳ್ಳುವುದಿಲ್ಲ ಜೈಲಿಗೆ ಹೋದವರನ್ನು ನಾವು ಸೇರಿಸಿಕೊಳ್ಳುವುದಿಲ್ಲ ಅಂತಾ ಸಚಿವ ಸಿ.ಪಿ.ಯೋಗೀಶ್ವರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನ ಲೇವಡಿ ಮಾಡಿದ್ರು. ಬಿಡದಿಯ ಈಗಲ್ ಟನ್ ರೆಸಾರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ವಲಸೆ ಹೋಗಿರುವವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನಿಸಿರುವ ಡಿಕೆಶಿಗೆ ಸಿಪಿವೈ ತಿರುಗೇಟು ನೀಡಿದ್ರು. ಇನ್ನೂ ಹೆಚ್.ಡಿ.ಕೆ ವಿರುದ್ದ ಮಾತನಾಡಿ ಕೆಆರ್‌ಎಸ್ ಸುತ್ತಲೂ ಕಲ್ಲುಗಣಿಗಾರಿಕೆ ಅನೇಕ ವರ್ಷಗಳಿಂದ ನಡೆಯುತ್ತಿದೆ, ಈ ಬಗ್ಗೆ ಮಂಡ್ಯ ಸಂಸದರಿಗೆ ಆತಂಕ ಇರಬೇಕು ಅವರು ತಮ್ಮ ಆತಂಕವನ್ನು ವ್ಯಕ್ತ ಪಡಿಸಿದ್ದಾರೆ, ಈ ಬಗ್ಗೆ ಕುಮಾರಸ್ವಾಮಿ ಮಾತನಾಡಿರುವುದು ಸರಿ ಇಲ್ಲಾ ಅವರು ಈಗಾಗಲೇ ತಮ್ಮ ವ್ಯಕ್ತಿತ್ವ ಕಳೆದುಕೊಂಡಿದ್ದಾರೆ, ಅವರ ಮಾತುಗಳು ತೂಕ ಕಳೆದುಕೊಂಡಿದೆ ಅವರ ರಾಜಕೀಯ ನೆಲೆ ದಿನೆದಿನೇ ಕಳೆದುಕೊಳ್ಳುತ್ತಿದೆ ನಾನು ಹೇಳಿಕೊಟ್ಟ ಮಾರನೆ ದಿನಕ್ಕೆ ಕುಮಾರಸ್ವಾಮಿ ಸಿಎಂ ಅವರನ್ನ ಭೇಟಿ ಮಾಡುತ್ತಾರೆ ಹೆಚ್‌ಡಿಕೆಗೆ ಹತಾಶೆ ಮನೋಭಾವಾ ಅಲ್ಲಿ ಅವರ ಮಗನನ್ನು ಸೋಲಿಸಿದ್ದಾರೆ ಉತ್ತರ ಕರ್ನಾಟದಕಲ್ಲಿ ಜಿಡಿಎಸ್  ನೆಲೆ ಇಲ್ಲ ಮಂಡ್ಯ ಬಿಡಲು ರೆಡಿ ಇಲ್ಲ ಹೀಗಾಗಿ ಏನೆನೋ ಮಾತನಾಡುತ್ತಿದ್ದಾರೆ ಅಂತಾ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ರು. ನನ್ನ ನಿಲುವನ್ನು ಆಗಾಗೆ ವ್ಯಕ್ತ ಪಡಿಸುತ್ತೇನೆ ಲೋಪಗಳ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದೇನೆ ಐದು ಭಾರಿ ನಾನು ಗೆಲುವು ಸಾಧಿಸಿದ್ದೇನೆ ರೇಣುಕಾಚಾರ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದಾನೆ ಅವರಿಗೆ ಬೆಂಗಳೂರಿನಲ್ಲಿ ಐಷಾರಾಮಿ ಮನೆ ಸಿಕ್ಕಿದೆ ಎಂದರೆ ಅಲ್ಲಿ ನನ್ನ ಶ್ರಮವಿದೆ ಎಂದು ರೇಣುಕಾಚಾರ್ಯರನ್ನ ಕುಟುಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments