ವೃಷಬಾವತಿ ಕೆರೆಗೆ ನೀರು ತುಂಬಿಸುವ ಯೋಜನೆ ಅನುಷ್ಟಾನ

Webdunia
ಗುರುವಾರ, 8 ಜುಲೈ 2021 (18:49 IST)
ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500.00 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ ಕೃಷಿಗೆ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಟಾನಗೊಳಿಸುವುದಾಗಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ರವರು ಬಿಡದಿಯ ಲ್ಲಿನಡೆದ ಮಾಧ್ಯಮ ಗೋಷ್ಟಿಯಲ್ಲಿ ತಿಳಿಸಿದ್ದಾರೆ.
 
ಸಚಿವ ಯೋಗೇಶ‍್ವರ ರವರು ಇಂದು ಬೆಳಿಗ್ಗೆ ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಗಾಳಿ ಆಂಜನೇಯ ದೇವಾಲಯದಿಂದ ಬಿಡದಿಯ ಬೈರಮಂಗಲ ಕೆರೆಯವರೆಗೂ ವೃಷಬಾವತಿ ನದಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 
 
ಬೆಂಗಳೂರು ನಗರದ ಶೇ.40 ರಷ್ಟು ತ್ಯಾಜ್ಯ ನೀರು ವೃಷಬಾವತಿ ನದಿ ಮೂಲಕ ಬಿಡದಿಯ ಬೈರಮಂಗಲ ಕೆರೆಗೆ ಸೇರುತ್ತೀದೆ. ಪ್ರಸಕ್ತ ಕೇವಲ ಎರಡು ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲಾಗುತ್ತಿದ್ದು, ಈ ನೀರು ಕೃಷಿ ಸೇರಿದಂತೆ ಯಾವುದಕ್ಕೂ ಬಳಸಲು ಸಾಧ್ಯವಿಲ್ಲ. ಇನ್ನೊಂದೆಡೆ ಸಂಸ್ಕರಣೆ ಮಾಡಿದ ನೀರನ್ನು ಚರಂಡಿಗಳಿಗೆ ಹರಿಸುತ್ತಿದ್ದು, ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ. 
 
ಬೆಂಗಳೂರು ನಗರದ ವೃಷಬಾವತಿ ಕಣಿವೆ ವ್ಯಾಪ್ತಿಯಲ್ಲಿ ಹರಿಯುವ 1500 ಎಂ.ಎಲ್‍.ಡಿ ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಿ, ಕೆರೆಗಳನ್ನು ತುಂಬಿಸುವುದು ಹಾಗೂ ಕೃಷಿ ಚಟುವಟಿಕೆಗಳಿಗೆ ಬಳಸುವುದು ನಮ್ಮ ಉದ್ದೇಶವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮೇಲಿಗೆ ಆ ಎರಡು ತೂಗುಗತ್ತಿ: ಯಾವುದು ನೋಡಿ

ಮಗನಿಗೆ ಮೊಬೈಲ್ ನೋಡಬೇಡ ಎಂದಿದ್ದೆ ತಪ್ಪಾಯ್ತು, ತಂದೆ, ಅಕ್ಕನ ಹತ್ಯೆ, ತಾಯಿ ಗಂಭೀರ

ಬಿಜೆಪಿಗೆ ಗುಡ್‌ಬೈ ಹೇಳಿ 24ಗಂಟೆಯೊಳಗೆ ಕೆ ಅಣ್ಣಾಮಲೈಗೆ ಬೆಂಬಲ ಕೊಟ್ಟ ಜನವೆಷ್ಟು ಗೊತ್ತಾ, ಶಾಕ್‌

ಮಲ್ಲಿಕಾರ್ಜುನ ಖರ್ಗೆಯವರ ಅರೆಬರೆ ಜ್ಞಾನ ಅಪಾಯಕಾರಿ: ಜೆಪಿ ನಡ್ಡಾ ಕಿಡಿ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments