Webdunia - Bharat's app for daily news and videos

Install App

ಮಗಳ ಜೊತೆಗೆ ಮಾತ್ರವಲ್ಲ, ಮಗನ ಜೊತೆಗೂ ಸಿಪಿ ಯೋಗೇಶ್ವರ್ ಕಿರಿಕ್

Krishnaveni K
ಮಂಗಳವಾರ, 19 ನವೆಂಬರ್ 2024 (12:00 IST)
ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ ಸಿಪಿ ಯೋಗೇಶ್ವರ್ ಗೆ ಮಗಳ ಜೊತೆ ಮಾತ್ರವಲ್ಲ ಮಗನ ಜೊತೆಗೂ ಕಿರಿಕ್ ಆಗಿರುವುದು ಬೆಳಕಿಗೆ ಬಂದಿದೆ. ಇದೀಗ ಯೋಗೇಶ್ವರ್ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗಷ್ಟೇ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಂಡಾಗ ಈಗಾಗಲೇ ಕಾಂಗ್ರೆಸ್ ನಲ್ಲಿರುವ ಅವರ ಪುತ್ರಿ ನಿಶಾ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯೋಗೇಶ್ವರ್ ಮೊದಲನೇ ಪತ್ನಿಯ ಮಗಳಾದ ನಿಶಾ ಮೊದಲಿನಿಂದಲೂ ತಮ್ಮ ತಂದೆಯ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ.

ಮೊನ್ನೆ ಮತದಾನದ ದಿನವೂ ತಮ್ಮ ತಂದೆಯೇ ಅಭ್ಯರ್ಥಿಯಾಗಿದ್ದರೂ ನನ್ನ ಮೂಲಭೂತ ಹಕ್ಕುಗಳನ್ನೇ ಕಸಿದಿದ್ದಾರೆ ಎಂದು ಮತದಾನವನ್ನೇ ಮಾಡದೇ ತಂದೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅವರ ಪುತ್ರ ಶ್ರವಣ್ ಕೂಡಾ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ.

ಯೋಗೇಶ್ವರ್ ತಮ್ಮ ಮೊದಲನೇ ಪತ್ನಿ ಮತ್ತು ಪುತ್ರ ಶ್ರವಣ್ ಬೆಂಗಳೂರಿನಲ್ಲಿ ಮನೆಯೊಂದನ್ನು ಖರೀದಿ ಮಾಡಿದ್ದರು. ಈ ಮನೆಯನ್ನು ಮೊದಲನೇ ಪತ್ನಿ ಮತ್ತು ಮಕ್ಕಳಿಗೆ ಉಡುಗೊರೆಯಾಗಿ ನೀಡಿದ್ದರು.ಆದರೆ ಇದೀಗ ಯೋಗೇಶ್ವರ್ ಪುತ್ರನ ಸಹಿ ನಕಲು ಮಾಡಿ ಅದರಲ್ಲಿ ಆತ ಪಾಲು ಕೇಳಿರುವಂತೆ ವಿವಾದ ಸೃಷ್ಟಿಸಿದ್ದಾರೆ.

ವಕೀಲರು ನನಗೆ ಆಸ್ತಿ ವಿಚಾರದ ಬಗ್ಗೆ ಹೇಳಿದಾಗ ಅಚ್ಚರಿಯಾಯಿತು. ನಾನು ಯಾವುದೇ ಸಹಿ ಹಾಕಿರಲಿಲ್ಲ. ಯೋಗೇಶ್ವರ್ ಅವರೇ ನನ್ನ ಸಹಿಯನ್ನು ನಕಲು ಮಾಡಿದ್ದರು ಎಂದು ಶ್ರವಣ್ ಆರೋಪಿಸಿದ್ದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments