Webdunia - Bharat's app for daily news and videos

Install App

ಮಹಿಳೆಯಿಂದ ಡಿಕೆಶಿ ಕೊರಳಪಟ್ಟಿ ಹಿಡಿಸಿ, ಪೊರಕೆಯಿಂದ ಹೊಡಿಸುತ್ತೇನೆ ಎಂದ ಸಿ.ಪಿ.ಯೋಗೀಶ್ವರ

Webdunia
ಗುರುವಾರ, 4 ಜನವರಿ 2018 (16:14 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಸಿ.ಪಿ.ಯೋಗೀಶ್ವರ ಚನ್ನಪಟ್ಟಣದಲ್ಲಿ ಮಹಿಳೆಯೊಬ್ಬರ ಕೈಯಲ್ಲಿ ಡಿ.ಕೆ.ಶಿವಕುಮಾರ ಅವರ ಕೊರಳಪಟ್ಟಿ ಹಿಡಿಸಿ, ಪೊರಕೆಯಿಂದ ಹೊಡಿಸುತ್ತೇನೆ ಎಂದು ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ ಗೆಲ್ಲುವುದಿಲ್ಲ, ಬೆಟ್ಟು ಕಟ್ಟುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಂತ್ರಿಯಾಗಿದ್ದುಕೊಂಡು ಜೂಜಿನ ಬಗ್ಗೆ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ ಅವರು ಕನಕಪುರ ಕ್ಷೇತ್ರದಲ್ಲಿ ಸ್ಪರ್ಧಿಸದೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದರೆ ಸಾಮಾನ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಡಿಕೆಶಿ ವಿರುದ್ಧ ಗೆಲ್ಲುಸುತ್ತೇನೆ. ಈ ಸವಾಲನ್ನು ಸ್ವೀಕರಿಸಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಲಿ ಎಂದಿದ್ದಾರೆ.
 
ಡಿಕೆಶಿ ನಾಲಿಗೆ ಮೇಲೆ ಹಿಡಿತವಿಲ್ಲ. ಹುಚ್ಚು ಹಿಡಿದಿರಬೇಕು. ಬಲ ಪ್ರಯೋಗ ಮಾಡಿ ಜನರನ್ನು ಕರೆತಂದರು. ಚನ್ನಪಟ್ಟಣದಲ್ಲಿ ವೀರಾವೇಶದಿಂದ ಮಾತನಾಡಿ ಜನರನ್ನು ದಾರಿ ತಪ್ಪಿಸಲು ಯತ್ನಿಸಿ ಮಾಗಡಿಯಲ್ಲಿ ನಿದ್ರೆಗೆ ಜಾರಿದ್ದಾರೆ ಎಂದು ಟೀಕಿಸಿದ್ದಾರೆ.

ಜನವರಿ 17ರಂದು ಬಿಜೆಪಿಯ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments