Webdunia - Bharat's app for daily news and videos

Install App

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ: ಪರಮೇಶ್ವರ್

Webdunia
ಸೋಮವಾರ, 21 ಆಗಸ್ಟ್ 2023 (14:03 IST)
ಬೆಂಗಳೂರು : ಸಚಿವ ರಾಜಣ್ಣ ಅವರ ಸಿಎಂ ಹೇಳಿಕೆ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಪರಮೇಶ್ವರ್ ಸಿಎಂ ಆಗಬೇಕು ಎಂಬ ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾರ್ವಜನಿಕ ಸಭೆಯಲ್ಲಿ ರಾಜಣ್ಣ ಒಳ್ಳೆ ಮಾತನಾಡಿದ್ದಾರೆ. ಅದನ್ನು ವಿಶ್ಲೇಷಣೆ ಮಾಡುವುದು ಏನಿದೆ? ನಾನು ಸಿಎಂ ಆಗಬೇಕು ಎಂಬುದರ ಸಾಧ್ಯಾಸಾಧ್ಯತೆ ನಿಮಗೇ ಗೊತ್ತಿದೆ ಎಂದರು.

ಬಿಕೆ ಹರಿಪ್ರಸಾದ್ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವೆಲ್ಲ ವೈಯಕ್ತಿಕವಾಗಿ ಅನೇಕ ವಿಚಾರ ಪ್ರಸ್ತಾಪ ಮಾಡ್ತೀವಿ. ಅದು ಸರ್ಕಾರ ಹಾಗೂ ಪಕ್ಷದ ಮಾತಾಗುವುದಿಲ್ಲ. ಪಕ್ಷದ ಸಭೆಯಲ್ಲಿ ಚರ್ಚೆಯಾಗಿ ತೀರ್ಮಾನಗಳಾದರೆ ಸಮರ್ಥನೆ ಮಾಡಿಕೊಳ್ಳಬಹುದು. ವೈಯಕ್ತಿಕ ಹೇಳಿಕೆಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಇನ್ನಷ್ಟು ಡಿಸಿಎಂ ಹುದ್ದೆಗಳು ಸೃಷ್ಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ನವರು ಏನು ಸರಿ ಅನಿಸುತ್ತದೆ ಹಾಗೆ ಮಾಡ್ತಾರೆ. ಒಬ್ಬರು ಡಿಸಿಎಂ ಇರಬೇಕು ಎಂದು ಹೈಕಮಾಂಡ್ನವರೇ ತೀರ್ಮಾನ ಮಾಡಿದ್ದಾರೆ. ಜಾಸ್ತಿ ಮಾಡಬೇಕು ಎಂದರೆ ಅವರೇ ತೀರ್ಮಾನ ಮಾಡಬೇಕು. ನಾನೇನು ಅಂದು ಮನವಿ ಮಾಡಿಲ್ಲ ಈಗಲೂ ಮಾಡಿಲ್ಲ. ಏನೇ ನಿರ್ಧಾರ ಮಾಡುವುದಕ್ಕೆ ಮುಂಚೆ ಹಿರಿಯರ ಜೊತೆಗೆ ಚರ್ಚೆ ಮಾಡ್ತಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments