Webdunia - Bharat's app for daily news and videos

Install App

ಕೆರೆಗೋಡು ಪ್ರಕರಣದಲ್ಲಿ ಕಾಂಗ್ರೆಸ್‌ ನಿಂದ ಸುಳ್ಳುದಾಖಲೆ ಸೃಷ್ಟಿ – ಎಚ್‌ಡಿಕೆ

geetha
ಮಂಗಳವಾರ, 30 ಜನವರಿ 2024 (21:04 IST)
ಬೆಂಗಳೂರು : ಗೌರಿಶಂಕರ ಟ್ರಸ್ಟ್‌ ವತಿಯಿಂದ ಕೆರೆಗೋಡು ಗ್ರಾಮದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅನುಮತಿ ಕೇಳಲಾಗಿತ್ತು. ಕೆರೆಗೋಡು ಗ್ರಾಮಪಂಚಾಯಿತಿ ಅನುಮತಿಯನ್ನೂ ಸಹ ನೀಡಿತ್ತು. ಅನುಮತಿಯಲ್ಲಿ ರಾಷ್ಟ್ರ ಧ್ವಜ ಅಥವಾ ಕೇಸರಿ ಧ್ವಜ ಎಂದು ಪ್ರತ್ಯೇಕವಾಗಿ ನಮೂದಿಸಿರಲಿಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸುಳ್ಳು ದಾಖಲೆ ಸೃಷ್ಟಸಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ ಅವರು ತಾವೂ ಸಹ ತಮ್ಮ ಅಭಿಮಾನಿಗಳೂ ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಿ ಹೇಳಿದರು. ಜ.19 ರಂದು ಅನುಮತಿ ಕೇಳಿರುವಂತೆ ಕಾಂಗ್ರೆಸ್‌ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಆರೋಪಿಸಿದ ಎಚ್‌ಡಿಕೆ ಜ.26 ರಂದು ರಾಷ್ಟ್ರಧ್ವಜ ಹಾರಿಸಿರುವ ಗ್ರಾಮಸ್ಥರೇ ಮಾರನೆಯ ದಿನ ಹನುಮ ಧ್ವಜ ಹಾರಿಸಿದ್ದಾರೆ. ಈ ಧ್ವಜಸ್ತಂಭವನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ  ಉದ್ಘಾಟನೆ ಮಾಡಿದ್ದು, ಶಾಸಕರನ್ನು ಆಹ್ವಾನಿಸದ ಕಾರಣ ಇವೆಲ್ಲಾ ನಡೆದಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments