Select Your Language

Notifications

webdunia
webdunia
webdunia
webdunia

ದರ್ಶನ್ ಫೋಟೊ ತೆಗೆದವರ ವಿರುದ್ಧ ಕ್ರಿಮಿನಲ್ ಕೇಸ್: ಮುನಿರತ್ನ

ದರ್ಶನ್ ಫೋಟೊ ತೆಗೆದವರ ವಿರುದ್ಧ ಕ್ರಿಮಿನಲ್ ಕೇಸ್: ಮುನಿರತ್ನ
ಬೆಂಗಳೂರು , ಬುಧವಾರ, 20 ಸೆಪ್ಟಂಬರ್ 2017 (15:03 IST)
ಬೆಂಗಳೂರು: ಕುರುಕ್ಷೇತ್ರ ಸೆಟ್ ನಲ್ಲಿ ನಟ ದರ್ಶನ್ ಜತೆಯಿದ್ದ ನಟಿ ಪವಿತ್ರ ಗೌಡ ಫೋಟೊ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಮ್ಮ ಅನುಮತಿ ಇಲ್ಲದೆ ಚಿತ್ರದ ಸೆಟ್ ಗೆ ಬಂದು ಯಾರೊ ಫೋಟೋ ತೆಗೆದಿದ್ದಾರೆ ಎಂದು ನಿರ್ಮಾಪಕ ಮುನಿರತ್ನ ಹೇಳಿದ್ದಾರೆ.

ನಮ್ಮ ಅನುಮತಿ ಇಲ್ಲದೆ ನಮ್ಮ ಚಿತ್ರದ ಸೆಟ್ ಗೆ ಬಂದು ಫೋಟೋ ತೆಗೆದಿದ್ದಲ್ಲದೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಫೋಟೊ ತೆಗೆದಿರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಎಷ್ಟೇ ದೊಡ್ಡವರಾಗಿದ್ದರು ಅವರಿಗೆ ಶಿಕ್ಷೆ ಕೊಡಿಸದೆ ಬಿಡುವುದಿಲ್ಲ. ಈ ಕುರಿತು ದೂರು ದಾಖಲಿಸುವುದಾಗಿ ಮುನಿರತ್ನ ಹೇಳಿದ್ದಾರೆ.

ಇನ್ನು ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರ್ಜರಿ ಸೆಟ್ ನಲ್ಲಿ ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ನಡೀತಿದೆ. ಈ ವೇಳೆ ಪವಿತ್ರ ಗೌಡ, ದರ್ಶನ್ ಜತೆ ಮಾತುಕತೆ ನಡೆಸುತ್ತಿರುವ ಫೋಟೊ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

18 ಶಾಸಕರ ಅನರ್ಹ ಆದೇಶಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ