ಆ ಗ್ರಾಮಸ್ಥರು ಮೊಸಳೆ ಸೆರೆಹಿಡಿದದ್ದು ಹೇಗೆ ಗೊತ್ತಾ?

Webdunia
ಮಂಗಳವಾರ, 11 ಡಿಸೆಂಬರ್ 2018 (14:27 IST)
ಆ ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಕೂಡಲೇ ಅಲ್ಲಿನ ಯುವಜನತೆ ಒಗ್ಗಟ್ಟಾಗಿ ಭಯಾನಕವಾದ ಮೊಸಳೆಯನ್ನು ಸೆರೆಹಿಡಿದಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗುಂಡಕರ್ಚಗಿ ಗ್ರಾಮದ ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೊಸಳೆಯನ್ನು ನೋಡಿದ ಗ್ರಾಮಸ್ಥರು ತಕ್ಷಣವೇ ಯುವಕರ ಜತೆ ಸೇರಿ, ಮೊಸಳೆ ಹಿಡಿದು ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ತಂದಿಟ್ಟರು. ಅರಣ್ಯ ಇಲಾಖೆಯ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆಯನ್ನು ತಮ್ಮ ವಶಕ್ಕೆ ಪಡೆದುಕೊಂಡರು. ಹಿಂದೆ ಹಳ್ಳದ ಪಕ್ಕದಲ್ಲಿ ಕುರಿಗಾಯಿಯ ವಾಸವಿದ್ದು, ಈ ಮೊಸಳೆ ನೀರು ಕುಡಿಯಲು ಹೋದ ಎರಡು ಕುರಿಗಳನ್ನು ತಿಂದು ಹಾಕಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನದ ನಂತರ ಭಾರೀ ಮಳೆ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಮುಂದಿನ ಸುದ್ದಿ
Show comments