Webdunia - Bharat's app for daily news and videos

Install App

ಬೆಳೆ ಪರಿಹಾರ ಹಣದ ಚೆಕ್ ನೋಡಿ ದಂಗಾದ ರೈತ

Webdunia
ಮಂಗಳವಾರ, 27 ಆಗಸ್ಟ್ 2019 (16:46 IST)
ಪ್ರಕೃತಿ ವಿಕೋಪದಿಂದ ರೈತ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿತ್ತು. ಆದರೆ ಪರಿಹಾರ ಚೆಕ್ ಬಂದದ್ದನ್ನ ನೋಡಿರೋ ರೈತ ಕಂಗಾಲಾಗಿದ್ದಾನೆ.  

ಮಂಡ್ಯ ಜಿಲ್ಲೆಯ ಬೂಕನಕೆರೆ ಹೋಬಳಿಯ ವಿಜಯ ಹೊಸಹಳ್ಳಿ ಗ್ರಾಮದ ಸಿದ್ದೇಗೌಡರ ಮಗ  ಸಿದ್ದಲಿಂಗೇಗೌಡ (40)   ಸರ್ವೆ ನಂಬರ್ 12/5 ರಲ್ಲಿ ಸುಮಾರು 2:30 ಎಲ್ಲಿ  ಗುಂಟೆಯಲ್ಲಿ ಬಾಳೆ ಬೆಳೆದಿದ್ದರು.    

ಜೂನ್ ತಿಂಗಳಲ್ಲಿ ಪ್ರಕೃತಿ ವಿಕೋಪದಿಂದ ಮಳೆಯಿಂದ ಒಂದು ಎಕರೆ ಸಂಪೂರ್ಣ ಬೆಳೆ  ನಾಶವಾಗಿದೆ. 1 ಲಕ್ಷಕ್ಕೂ ರೂಪಾಯಿಗೂ ಹೆಚ್ಚು ಬಾಳೆ ಬೆಳೆ ನಾಶವಾಗಿತ್ತು.

ಸಂಬಂಧಪಟ್ಟ ಅಧಿಕಾರಿಗಳು ನಾನು ಬೆಳೆದಿದ್ದ ಬೆಳೆಯನ್ನು ವೀಕ್ಷಣೆ ಮಾಡಿ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದರು. ಪರಿಹಾರ ಧನ ಸಹಾಯದ ಚೆಕ್ ನೋಡಿ ನನಗೆ ದಿಕ್ಕು ತೋಚದಂತಾಗಿದೆ. ಕೇವಲ 1,350 ರೂಪಾಯಿಗಳನ್ನು ಪರಿಹಾರದ ಹಣ ಎಂದು ಕೃಷ್ಣರಾಜಪೇಟೆ ಪಟ್ಟಣದ  ತಹಸೀಲ್ದಾರ್ ನೀಡಿದ್ದಾರೆ.  

ನಾನು ಸಾಲ ಮಾಡಿ ಬೆಳೆದಿದ್ದ ಬೆಳೆಗೆ ತಕ್ಕ ಬೆಲೆ ಸಿಕ್ಕಿಲ್ಲ. ಹೀಗಾಗಿ ನಾನು ಮತ್ತೆ ಆ ಚೆಕ್ಕನ್ನು ತಹಸೀಲ್ದಾರರಿಗೆ ನೀಡಿದ್ದೇನೆ. ಹೆಚ್ಚಿನ ಪರಿಹಾರಕ್ಕೆ ನಾನು ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದು ರೈತ ಹೇಳಿಕೊಂಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments