Webdunia - Bharat's app for daily news and videos

Install App

ಬೆಳೆ ನಾಶ: ಅಧಿಕಾರಿಗಳ ಜತೆ ಚರ್ಚಿಸುವೆ ಎಂದ ಸಿಎಂ

Webdunia
ಸೋಮವಾರ, 17 ಸೆಪ್ಟಂಬರ್ 2018 (19:10 IST)
ಕಲಬುರಗಿ ತಾಲೂಕಿನ ಚೌಡಾಪೂರ ತಾಂಡದ ಸಂತೋಷ್ ಶಿವಾಜಿ ಕೋಕರೆ ಅವರ ಹೊಲದಲ್ಲಿ ತೊಗರಿ ಬೆಳೆ ಸಮೀಕ್ಷೆಯನ್ನು ಸಿಎಂ ನಡೆಸಿದರು. ಕಲಬುರಗಿಯಲ್ಲಿ ಬೆಳೆ ಸಮೀಕ್ಷೆ ನಡೆಸಿದಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಗಿಡಗಳು ಫಸಲು ಕಟ್ಟದೆ ಇರುವುದಕ್ಕೆ ಕಾರಣಗಳೇನು ಎಂದು ಅಧಿಕಾರಿಗಳಿಗೆ ಮಾಹಿತಿ ಕೇಳಿದರು.

ವಿಳಂಬವಾಗಿ ಬಿತ್ತನೆ ಹಾಗೂ ಬಿತ್ತನೆ ಬಳಿಕ ತೇವಾಂಶದ ಕೊರತೆಯಿಂದ ಫಸಲು ಕಟ್ಟುತ್ತಿಲ್ಲ. ಗಿಡಗಳು ಇಷ್ಟೊತ್ತಿಗೆ ಒಂದರಿಂದ ಒಂದುವರೆ ಮೀಟರ್ ಬೆಳೆದು ಫಸಲು ಕಟ್ಟಾಬೇಕಾಗಿತ್ತು. ಆದರೆ, ಕೇವಲ ಒಂದು ಅಡಿ ಬೆಳೆದಿದೆ. ಇದೇ ಟಿಎಸ್3ಆರ್ ತಳಿಯ ತೊಗರಿ ಗಿಡಗಳು, ಸೇಡಂನಲ್ಲಿ ಒಂದುವರೆ ಮೀಟರ್‍ನಷ್ಟು ಬೆಳೆದಿರುವುದನ್ನು ಪ್ರಾತ್ಯಕ್ಷಿಕೆ ಮೂಲಕ  ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಿತೇಂದ್ರನಾಥ್ ಸುಗೂರು ಅವರು ವಿವರಿಸಿದರು.

ಉನ್ನತ ಅಧಿಕಾರಿಗಳ ಸಭೆ: ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬೆಳೆ ನಾಶ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಅವರು ಭರವಸೆ ನೀಡಿದರು.

ಬಳಿಕ, ಗಬ್ಬೂರ (ಬಿ) ಗ್ರಾಮದ ಮೊಹಮದ್ ಹುಸೇನಿ ಮೌಲಾ ಸಾಬ್ ಮಕದಮ್ ಅವರ ಹೊಲದಲ್ಲಿ ಉದ್ದು ಬೆಳೆಯನ್ನು ವೀಕ್ಷಿಸಿದರು. ಟಿಎಯು-1 ತಳಿಯ ಈ ಉದ್ದು ಬೆಳೆ ಕೂಡ ತೇವಾಂಶ ಇಲ್ಲದೆ ಹೂ ಬಿಡುವ ಹಂತದಲ್ಲಿ ನಾಶವಾಗಿದೆ. ಸರಿಯಾಗಿ ಬೆಳೆ ಬಂದರೆ, ಒಂದು ಗಿಡಕ್ಕೆ 60 ರಿಂದ 70 ಕಾಯಿಗಳ ಕಟ್ಟಿ, 8 ರಿಂದ 10 ಬೀಜಗಳು ಇರಬೇಕು. ಆದರೆ, ಹೂ ಬಿಡುವ ಮುನ್ನ 8 ರಿಂದ 10 ದಿನಗಳ ಕಾಲ ನೀರಿಲ್ಲದೆ,  ಇರುವುದರಿಂದ ಕೇವಲ ನಾಲ್ಕೈದು ಬೀಜಗಳು ಇವೆ ಎಂದು ಕೃಷಿ ಅಧಿಕಾರಿಗಳು ವಿವರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments