Webdunia - Bharat's app for daily news and videos

Install App

ಬೆನ್ನುಬಿಡದ ಕುಂಭದ್ರೋಣ ಮಳೆ; ರಾಜ್ಯದಲ್ಲಿ ಅಪಾರ ಬೆಳೆಹಾನಿ

Webdunia
ಸೋಮವಾರ, 9 ಜುಲೈ 2018 (15:29 IST)
ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. 
ಕಳೆದರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಕೃಷಿಗಾರಿಕೆಯಲ್ಲಿ ಬಹಳಷ್ಟು ನಷ್ಟ ಸಂಭವಿಸಿದೆ. ಕಳೆದ 3 ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಬಿಳಿಯಾರು ಪರಿಸರದ    ಕೃಷಿ ಭೂಮಿ ಗೆ ನೆರೆ ನೀರು ನುಗ್ಗಿದೆ. ಅತಿವೃಷ್ಟಿಯಿಂದ ಗದ್ದೆಯಲ್ಲಿ ಬಿತ್ತನೆ ಮಾಡಿದ ಬೀಜಗಳು ನೆರೆಯ ಪಾಲಾಗಿದ್ದು ಇಲ್ಲಿನ ರೈತರು ಕಂಗಾಲಾಗಿದ್ದಾರೆ. 

ಸುಮಾರು 5 ಎಕ್ಕರೆ ಜಾಗದಷ್ಟು ಗದ್ದೆಗಳಿಗೆ ಮಳೆ ನೀರು ನುಗ್ಗಿದ್ದು ಗದ್ದೆ ತುಂಬಾ ಮರಳಿನ ರಾಶಿ ತುಂಬಿಕೊಂಡಿವೆ. ಒಂದಡೆ ಗದ್ದೆಯಲ್ಲಿ ಬಿತ್ತಿರುವ ಬೀಜಗಳು ನೀರು ಪಾಲಾಗಿ ಅರ್ಥಿಕ ಸಂಕಷ್ಟ ಏದುರಿಸುತ್ತಿರುವ ಇಲ್ಲಿನ ರೈತರು ಇನ್ನೋಂದಡೆ ಗದ್ದೆಯಲ್ಲಿ ಶೇಖರಣೆಯಾಗಿರುವ ಹೂಳನ್ನು ಎತ್ತಲು ಸಾದ್ಯವಾಗದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ರೈತರು ಸಂಕಟ ಏದುರಿಸುತ್ತಿದ್ದು ಬೆಳೆ ಹಾನಿಗೆ ಪರಿಹಾರ ಸಿಗಬೇಕು. 

ರೈತನೇ  ದೇಶದ ಬೆನ್ನಲುಬು ಅಂತಾ ಜನಪ್ರತಿ ನಿಧಿಗಳು ವೇದಿಕೆಯಲ್ಲಿ ಬಾಷಣ ಬಿಗಿಯುತ್ತಾರೆ. ಆದ್ರೆ ರೈತ ಸಂಕಷ್ಟದಲ್ಲಿದ್ದಾಗ ಅತನ ನೆರವಿಗೆ ಯಾವುದೇ ಸರಕಾರ ಬರುತ್ತಿಲ್ಲ. ಹೀಗಾಗಿ ರೈತ ಇತ್ತೀಚಿನ ದಿನಗಳಲ್ಲಿ ಕೃಷಿ  ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಿಲ್ಲ. ಸರಕಾರದ ನಿರ್ಲಕ್ಷ್ಯತೆಯಿಂದ ಕೃಷಿ ಭೂಮಿಗಳು ಇತ್ತೀಚಿನ ದಿನಗಳಲ್ಲಿ  ಹಡಿಲು ಬೀಳುತ್ತಿದೆ ಸರಕಾರ ಇನ್ನಾದ್ರೂ ಈ ಬಗ್ಗೆ ಗಮನ ಹರಿಸಬೇಕು ಎಂದು ಕೃಷಿಕರು  ಆಗ್ರಹ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments