ಬೆನ್ನುಬಿಡದ ಕುಂಭದ್ರೋಣ ಮಳೆ; ರಾಜ್ಯದಲ್ಲಿ ಅಪಾರ ಬೆಳೆಹಾನಿ

Webdunia
ಸೋಮವಾರ, 9 ಜುಲೈ 2018 (15:29 IST)
ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. 
ಕಳೆದರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಕೃಷಿಗಾರಿಕೆಯಲ್ಲಿ ಬಹಳಷ್ಟು ನಷ್ಟ ಸಂಭವಿಸಿದೆ. ಕಳೆದ 3 ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಬಿಳಿಯಾರು ಪರಿಸರದ    ಕೃಷಿ ಭೂಮಿ ಗೆ ನೆರೆ ನೀರು ನುಗ್ಗಿದೆ. ಅತಿವೃಷ್ಟಿಯಿಂದ ಗದ್ದೆಯಲ್ಲಿ ಬಿತ್ತನೆ ಮಾಡಿದ ಬೀಜಗಳು ನೆರೆಯ ಪಾಲಾಗಿದ್ದು ಇಲ್ಲಿನ ರೈತರು ಕಂಗಾಲಾಗಿದ್ದಾರೆ. 

ಸುಮಾರು 5 ಎಕ್ಕರೆ ಜಾಗದಷ್ಟು ಗದ್ದೆಗಳಿಗೆ ಮಳೆ ನೀರು ನುಗ್ಗಿದ್ದು ಗದ್ದೆ ತುಂಬಾ ಮರಳಿನ ರಾಶಿ ತುಂಬಿಕೊಂಡಿವೆ. ಒಂದಡೆ ಗದ್ದೆಯಲ್ಲಿ ಬಿತ್ತಿರುವ ಬೀಜಗಳು ನೀರು ಪಾಲಾಗಿ ಅರ್ಥಿಕ ಸಂಕಷ್ಟ ಏದುರಿಸುತ್ತಿರುವ ಇಲ್ಲಿನ ರೈತರು ಇನ್ನೋಂದಡೆ ಗದ್ದೆಯಲ್ಲಿ ಶೇಖರಣೆಯಾಗಿರುವ ಹೂಳನ್ನು ಎತ್ತಲು ಸಾದ್ಯವಾಗದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ರೈತರು ಸಂಕಟ ಏದುರಿಸುತ್ತಿದ್ದು ಬೆಳೆ ಹಾನಿಗೆ ಪರಿಹಾರ ಸಿಗಬೇಕು. 

ರೈತನೇ  ದೇಶದ ಬೆನ್ನಲುಬು ಅಂತಾ ಜನಪ್ರತಿ ನಿಧಿಗಳು ವೇದಿಕೆಯಲ್ಲಿ ಬಾಷಣ ಬಿಗಿಯುತ್ತಾರೆ. ಆದ್ರೆ ರೈತ ಸಂಕಷ್ಟದಲ್ಲಿದ್ದಾಗ ಅತನ ನೆರವಿಗೆ ಯಾವುದೇ ಸರಕಾರ ಬರುತ್ತಿಲ್ಲ. ಹೀಗಾಗಿ ರೈತ ಇತ್ತೀಚಿನ ದಿನಗಳಲ್ಲಿ ಕೃಷಿ  ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಿಲ್ಲ. ಸರಕಾರದ ನಿರ್ಲಕ್ಷ್ಯತೆಯಿಂದ ಕೃಷಿ ಭೂಮಿಗಳು ಇತ್ತೀಚಿನ ದಿನಗಳಲ್ಲಿ  ಹಡಿಲು ಬೀಳುತ್ತಿದೆ ಸರಕಾರ ಇನ್ನಾದ್ರೂ ಈ ಬಗ್ಗೆ ಗಮನ ಹರಿಸಬೇಕು ಎಂದು ಕೃಷಿಕರು  ಆಗ್ರಹ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ರನ್ನು ಕೊಲೆ ಮಾಡಿದ್ದು ಯಾಕೆ: ಶಾಕಿಂಗ್ ಕಾರಣ ಬಿಚ್ಚಿಟ್ಟ ಸಿಯಾ ಗೋಯಲ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಸಂಭವ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಮುಂದಿನ ಸುದ್ದಿ
Show comments