Webdunia - Bharat's app for daily news and videos

Install App

ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು, ತನಿಖೆ ಕೈಗೆತ್ತಿಕೊಂಡ ಇ.ಡಿ

Webdunia
ಮಂಗಳವಾರ, 7 ಡಿಸೆಂಬರ್ 2021 (19:21 IST)
ಐಟಿ ಉದ್ಯೋಗಿಗಳ ಮಾದರಿ ಟಾರ್ಗೆಟ್ ಕೊಟ್ಟು ಕೆಲಸ ಮಾಡಿಸುವಂತೆ. ಹಾಗೂ ವಾಟ್ಸ್ ಗ್ರೂಪ್ ಮಾಡಿಕೊಂಡಿದ್ದ ದಂಧೆ ಕೊರರಿಂದ ಐಟಿ ಮಾದರಿ ವೈಟ್ ಬ್ಲ್ಯಾಕ್ ದಂಧೆ ನಡೆಯುತ್ತಿತ್ತು. ದಂಧೆ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದ ನಾಲ್ವರಿಗೆ, ರಿಯಾಜ್ ಒಂದು ದಿನಕ್ಕೆ 20 ಲಕ್ಷ ಟಾರ್ಗೆಟ್ ನೀಡಿದ್ದ.ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಬ್ಲಾಕ್ ಆಯಂಡ್ ವೈಟ್ ದಂಧೆ ಶುರುವಾಗಿದೆ. ಕೆಲ ದಿನಗಳ ಹಿಂದೆ ಪುಟ್ಟೇನಹಳ್ಳಿ ಠಾಣೆ ವಿಶೇಷ ಕಾರ್ಯಾಚರಣೆ ನಡೆಸಿ ಬ್ಲ್ಯಾಕ್ ಆಯಂಡ್ ವೈಟ್ ದಂಧೆ ಪ್ರಕರಣ ಬೆಳಕಿಗೆ ಬಂದಿತ್ತು. ಸದ್ಯ ಈಗ ಪೊಲೀಸರ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ.
 
ಕೇರಳಾ ಮೂಲದ ಕಿಂಗ್ ಪಿನ್ಗಳು ನಗರವನ್ನು ದಂಧೆಯ ಅಡ್ಡೆಯನ್ನಾಗಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರ ಟೀಂ ಜೂನ್ ನಲ್ಲಿ ಬೆಂಗಳೂರಿಗೆ ಆಗಮಿಸಿತ್ತು. ಫೈಜಲ್, ಅಬ್ದುಲ್ ಮುನಾಫ್, ಫಾಸಿಲ್, ಮೊಹಮ್ಮದ್ ಸಾಲಿಯರ ಗ್ಯಾಂಗ್ ಕಂಡು ಕಾಣದಂತೆ ದೂರದಲ್ಲಿದ್ದ ಕಿಂಗ್ ಪಿನ್ ರಿಯಾಜ್ ಜೊತೆ ಸಂಪರ್ಕ ಹೊಂದಿರುತ್ತಿತ್ತು. ಕಿಂಗ್ ಪಿನ್ ರಿಯಾಜ್ ಹೇಳಿದಂತೆ ಕಂಪ್ಲೀಟ್ ಬ್ಲಾಕ್ ಅಂಡ್ ವೈಟ್ ದಂಧೆ ನಡೆಯುತಿತ್ತು.ಕಿಂಗ್ ಪಿನ್ ರಿಯಾಜ್  ಐಟಿ ಉದ್ಯೋಗಿಗಳ ಮಾದರಿ ನಾಲ್ವರಿಗೂ ಟಾರ್ಗೆಟ್ ಕೊಟ್ಟು ಕೆಲಸ ಮಾಡಿಸುತ್ತಿದ್ದ. ಹಾಗೂ ವಾಟ್ಸಾಪ್ ಗ್ರೂಪ್ ಮಾಡಿಕೊಂಡಿದ್ದ ದಂಧೆ ಕೊರರಿಂದ ಐಟಿ ಮಾದರಿ ಟಾರ್ಗೆಟ್ ಕೊಟ್ಟು ವೈಟ್ ಬ್ಲ್ಯಾಕ್ ದಂಧೆ ನಡೆಯುತ್ತಿತ್ತು. ದಂಧೆ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದ ನಾಲ್ವರಿಗೆ, ರಿಯಾಜ್ ಒಂದು ದಿನಕ್ಕೆ 20 ಲಕ್ಷ ಟಾರ್ಗೆಟ್ ನೀಡ್ತಿದ್ದ. ದುಬೈನಿಂದ ಕೇರಳ ಮೂಲಕ ಬೆಂಗಳೂರಿಗೆ ಹವಾಲ ಹಣ ಬರುತ್ತಿತ್ತು. ಗೂಡ್ಸ್ ಲಾರಿಯಲ್ಲಿ ಕಾರ್ಟನ್ ನಲ್ಲಿ ಹಣ ತರಲಾಗುತ್ತಿತ್ತು. ಬಳಿಕ ಹಣವನ್ನು ಪಡೆದು ರಿಯಾಜ್ ಸೂಚನೆಯಂತೆ ಆತ ಹೇಳಿದ ಅಕೌಂಟ್ ಗೆ ಹಣವನ್ನು ಡೆಪಾಸಿಟ್ ಮಾಡಲಾಗುತ್ತಿತ್ತು. ಎಲ್ಲೋ ಕೂತು ಬೆಂಗಳೂರಿನಲ್ಲಿ ತನ್ನ ಟೀಂ ಜೊತೆ ರಿಯಾಜ್ ವ್ಯವಹಾರ ನಡೆಸುತ್ತಿದ್ದ. ಏನು ಮಾಡಬೇಕು, ಏನು ಬೇಡ ಎಂದು ಲೀಡ್ ಮಾಡುತ್ತಿದ್ದ.
 
ದಂಧೆಕೋರರಿಗೆ ರಿಯಾಜ್ ನೀಡುತಿದ್ದ ತಿಂಗಳ ಸಂಬಳ ತಲಾ 60 ಸಾವಿರ. ಇದನ್ನು ಹೊರತಾಗಿ ಅಲಯನ್ಸ್ ಸೇರಿ ತಲಾ 15 ಸಾವಿರ ಕೊಡುತ್ತಿದ್ದ. ಸದ್ಯ ರಿಯಾಜ್ ಹೇಳಿದಂತೆ ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಕೋಟಿ ಕೋಟಿ ಹಣವನ್ನು ಕೆಲವು ಖಾತೆಗಳಿಗೆ ಹಾಕಲಾಗಿದೆ. ಸದ್ಯ ಈಗ ಹೆಚ್ಚು ಹೂಡಿಕೆ ಮಾಡಿರುವ ಅಕೌಂಟ್ ಗಳನ್ನ ಫ್ರೀಜ್ ಮಾಡಲು ಮುಂದಾಗಿದ್ದಾರೆ. ನಾಪತ್ತೆಯಾಗಿರುವ ಕಿಂಗ್ ಪಿನ್ ರಿಯಾಜ್ಗಾಗಿ ಶೋಧ ನಡೆಯುತ್ತಿದೆ. ಪುಟ್ಟೇನಹಳ್ಳಿ ಪೊಲೀಸರಿಂದ ಮಾಹಿತಿ ಪಡೆದು ಐ.ಡಿ ತನಿಖೆ ಆರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments