Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

HD Kumaraswmay
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜೆಡಿಎಸ್‌ ಶಾಸಕರು ಅಡ್ಡ ಮತದಾನ ಮಾಡಿರುವುದು ಮುಗಿದು ಹೋಗಿರುವ ಅಧ್ಯಾಯವೆಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಎಂಎಲ್‌ಸಿ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನ ವಿಚಾರದಲ್ಲಿ ಬಿಜೆಪಿಯಿಂದ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಮುಂದಾಗಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ಮಾಡೋದ್ರಲ್ಲಿ ತಪ್ಪೇನು ಇಲ್ಲ. ಆದರೆ ಇದೀಗ ಅದು ಮುಗಿದು ಹೋದ ಅಧ್ಯಾಯವಾಗಿದೆ. 

ಈ ಸರ್ಕಾರದಲ್ಲಿ ಯಾರಿಗೆ ಬೇಕಾದ್ರೂ ಬ್ಲ್ಯಾಕ್ ಮೇಲ್ ಮಾಡ್ತಾರೆ. ಆಮಿಷ ಒಡ್ಡುವ ಎಕ್ಸ್‌ಫರ್ಟ್‌ಗಳು ಇದ್ದಾರೆ ಎಂದು ಕಿಡಿಕಾರಿದ್ದಾರೆ. 

ಇನ್ನೂ ಚುನಾವಣೆ ಸಂದರ್ಭದಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನಲ್ಲೇ ಕ್ರಾಸ್ ವೋಟಿಂಗ್ ಆಗಿದೆ. ಮ್ಯಾನ್ ಪವರ್, ಮಸಲ್ ಪವರ್, ಮನಿ ಪವರ್ ಎಲ್ಲಾ ಇದೆ. ಇದರಿಂದ ಬಿಜೆಪಿ ಸ್ನೇಹಿತರು ಆತಂಕಕ್ಕೆ ಒಳಗಾಗೋದು ಬೇಡ ಎಂದು ಹೇಳಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು