Webdunia - Bharat's app for daily news and videos

Install App

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

Krishnaveni K
ಮಂಗಳವಾರ, 29 ಜುಲೈ 2025 (16:07 IST)
ಕುಂದಾಪುರ, ಜುಲೈ 28,2025:  ಬದುಕಿನ ಸವಾಲುಗಳನ್ನು ಕಷ್ಟವೆಂದುಕೊಂಡು ಕೈಕಟ್ಟಿ ಕುಳಿತರೆ ಎಲ್ಲವೂ ಕಷ್ಟವಾಗುತ್ತದೆ. ಆದರೆ, ನಿರಂತರ ಅಭ್ಯಾಸದಿಂದ ಸವಾಲುಗಳನ್ನು ಹಿಮ್ಮೆಟ್ಟಿಸಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿ ಅವರು ಹೇಳಿದರು.  ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ ವಿದ್ಯಾರ್ಥಿಗಳಿಗೆ ಸೋಮವಾರ ಏರ್ಪಡಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ಬದುಕಿನಲ್ಲಿ ಪರಿಶ್ರಮ  ಅತ್ಯಂತ ಅಗತ್ಯ. ವಿದ್ಯಾರ್ಥಿ ಜೀವನವನ್ನು ಖುಷಿಯಿಂದ ಕಳೆಯುವುದರ ಜೊತೆಗೆ ಪರಿಶ್ರಮ ರೂಢಿಸಿಕೊಳ್ಳುವ ಕಡೆಗೆ ಗಮನಹರಿಸಬೇಕು. ಇದು ಭವಿಷ್ಯದ ಏಳ್ಗೆಗೆ ಭದ್ರ ಬುನಾದಿಯಾಗಲಿದೆ ಎಂದು ಕಿವಿಮಾತು ನುಡಿದರು.
 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, ಸಿಎ ಮತ್ತು ಸಿಎಸ್ ಹುದ್ದೆಗಳಿಗೆ ಇರುವ ಬೇಡಿಕೆಯ ಕುರಿತು ಮನವರಿಕೆ ಮಾಡಿಕೊಟ್ಟರು. ಸರಿಯಾದ ದಿಕ್ಕಿನಲ್ಲಿ ಪರಿಶ್ರಮ ವಹಿಸಿದರೆ ಎದುರಾಗುವ ಸವಾಲುಗಳಿಗೆ ಪರಿಹಾರ ಕಂಡುಕೊಂಡು ಸಾಧನೆಗೈಯುವುದು ಸಾಧ್ಯವಾಗುತ್ತದೆ. ಅಂತಹ ಶಕ್ತಿ .ವಿದ್ಯಾರ್ಥಿಗಳಿಗೆ ಇದೆ ಎಂದು ಅವರು ವಿವರಿಸಿದರು.
 
ಮುಂದುವರಿದು, ರಾಜ್ಯ ಹಾಗೂ ದೇಶದಲ್ಲಿ ಉದ್ಯಮಗಳು ಬೆಳೆಯುತ್ತಿರುವುದರಿಂದ ವಾಣಿಜ್ಯ, ಚಾರ್ಟೆಡ್ ಅಕೌಂಟೆಂಟ್, ಕಂಪನಿ ಸೆಕ್ರೆಟರಿ ಇತ್ಯಾದಿ ಹುದ್ದೆಗಳಿಗೆ ಬೇಡಿಕೆ ಅಧಿಕವಾಗಿದ್ದು ಮುಂಬರುವ ದಿನಗಳಲ್ಲಿ ಇದು ಇನ್ನಷ್ಟೂ ಏರಿಕೆ ಕಾಣಲಿದೆ.ಇದನ್ನು ಮನಗಂಡು ಕಾಲೇಜಿನಲ್ಲಿ ಈ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಿಂದಲೇ ಕೌಶಲಗಳನ್ನು ಮೈಗೂಡಿಸಲು ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು. 
 
 
ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾ, ಟಿವಿ ಎಂದು ಸಮಯವನ್ನು ವ್ಯರ್ಥಮಾಡದೆ, ಒಂದು ಗುರಿ ಇರಿಸಿಕೊಂಡು ಕನಸನ್ನು ನನಸು ಮಾಡಿಕೊಳ್ಳಬೇಕು. ಸಿಎ, ಸಿಎಸ್ ನಂತಹ ವೃತ್ತಿಪರ ಕೋರ್ಸುಗಳನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಕೌಶಲಗಳನ್ನು ಮೈಗೂಡಿಸಿಕೊಂಡು ವೃತ್ತಿಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಯಶಸ್ಸು ಕಾಣಬೇಕು ಎಂದು ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ನುಡಿದರು.
 
 
ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ, ಕುಂದಾಪುರದ ಚಾರ್ಟೆಡ್ ಅಕೌಂಟೆಂಟ್ ಸಿಎ ನಾಗರಾಜ್ ಹೆಬ್ಬಾರ್ ಉಪಸ್ಥಿತರಿದ್ದರು. 
 
ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ನಿರೂಪಿಸಿದರು. ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ಸ್ವಾಗತಿಸಿದರು, ಸಿಎ ಫೌಂಡೇಶನ್ ಸಂಯೋಜಕ ಪ್ರಮಥ್ ಶೆಟ್ಟಿ ವಂದಿಸಿದರು. ಕಾಲೇಜಿನ ಭೋದಕ ವೃಂದದವರು, ಭೋದಕೇತರ ಸಿಬ್ಬಂದಿ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನಲ್ಲಿ ಪಿಯುಸಿಯಿಂದಲೇ ವಿದ್ಯಾರ್ಥಿಗಳಿಗೆ ಸಿಎ ಹಾಗೂ ಸಿಎಸ್ ವೃತ್ತಿಪರ ಕೋರ್ಸ್ಗಳ ತರಬೇತಿ ನೀಡಲಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments