Webdunia - Bharat's app for daily news and videos

Install App

ಸಿಟಿ ರವಿ ಬಂಧಿಸಿ ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ಪೊಲೀಸರು: ವಿಡಿಯೋ

Krishnaveni K
ಶುಕ್ರವಾರ, 20 ಡಿಸೆಂಬರ್ 2024 (10:03 IST)
ಬೆಳಗಾವಿ: ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಶಬ್ಧ ಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವರನ್ನು ಬಂಧಿಸಿದ ಪೊಲೀಸರು ನಡೆದುಕೊಂಡಿರುವ ರೀತಿ ಈಗ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.
 

ಒಬ್ಬ ವಿಧಾನಪರಿಷತ್ ಸದಸ್ಯನನ್ನು ಈ ರೀತಿ ಏಕಾಏಕಿ ಪೊಲೀಸರು ಬಂಧಿಸುವಂತಿಲ್ಲ. ಅದಕ್ಕೆ ಸ್ಪೀಕರ್ ಒಪ್ಪಿಗೆ ಬೇಕಾಗುತ್ತದೆ. ಆದರೆ ಸಿಟಿ ರವಿಯವರನ್ನು ಏಕಾಏಕಿ ಬಂಧಿಸಿದ ಪೊಲೀಸರು ಖಾನಾಪುರ ಪೊಲೀಸ್ ಠಾಣೆಯಲ್ಲಿ ಮೂರು ಗಂಟೆಗೂ ಅಧಿಕ ಕಾಲ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ. ಅರೆಸ್ಟ್ ಮಾಡುವಾಗ ಕಾರಣವನ್ನೂ ನನಗೆ ನೀಡಿಲ್ಲ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಇನ್ನು ಇಲ್ಲಿಂದ ಎಲ್ಲಿಗೆ ಕರೆದೊಯ್ಯುತ್ತಾರೆ ಎಂಬ ಬಗ್ಗೆಯೂ ನನಗೆ ಮಾಹಿತಿ ನೀಡಿಲ್ಲ ಎಂದಿದ್ದಾರೆ.

ಒಬ್ಬ ಮಾಜಿ ಸಚಿವರೇ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳುತ್ತಿದ್ದರೆ ಈ ರಾಜ್ಯದಲ್ಲಿ ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೇ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇನ್ನು ಸಿಟಿ ರವಿ ಬಂಧನ ಖಂಡಿಸಿ ಇಂದು ಬಿಜೆಪಿ ಮತ್ತು ಸಿಟಿ ರವಿ ಬೆಂಬಲಿಗರು ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments