ಖರೀದಿ ಮಾಡಲು ಕಾಂಗ್ರೆಸ್ ಶಾಸಕರು ಕತ್ತೆ, ಕುದುರೆಗಳಾ: ಸಿಟಿ ರವಿ

Krishnaveni K
ಗುರುವಾರ, 14 ನವೆಂಬರ್ 2024 (16:10 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳಲ್ಲಿ ಆಧಾರ ಇದ್ದರೆ ಅದನ್ನು ಸಾಕ್ಷಿಸಮೇತ ನಿರೂಪಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಮತ್ತು  ಬಿಜೆಪಿ ನಿಕಟಪೂರ್ವ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸವಾಲೆಸೆದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಮೇಲೆ ಮಾಡಿದ ಆರೋಪಕ್ಕೆ ಅವರು ಪುಣೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ, 50 ಕೋಟಿ ಕೊಟ್ಟು ಶಾಸಕರನ್ನು ಖರೀದಿಸಲು ಹೊರಟಿದೆ ಎಂದು ತಿಳಿಸಿದ್ದಾರೆ. ಹಾಗಿದ್ದರೆ ನಿಮ್ಮ ಪಕ್ಷದ ಶಾಸಕರು ಅಷ್ಟೊಂದು ದುರ್ಬಲರೇ? ಖರೀದಿ ಮಾಡಲು ಕಾಂಗ್ರೆಸ್ ಶಾಸಕರು ಕುದುರೆಯೇ, ಕತ್ತೆಯೇ ಅಥವಾ ದನವೇ? ಕುದುರೆ, ಕತ್ತೆ, ದನ ಖರೀದಿಸಬಹುದು. ಬದ್ಧತೆ ಇರುವ ಶಾಸಕರನ್ನು ಖರೀದಿಸಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿಗಳದು ಆಧಾರ ಇಲ್ಲದ ಆರೋಪ. ಯಾರು ಖರೀದಿ ಮಾಡಲು ಪ್ರಯತ್ನಿಸಿದರು? ಯಾರನ್ನು ಖರೀದಿ ಮಾಡಲು ಪ್ರಯತ್ನಿಸಿದ್ದಾರೆ? ಯಾವಾಗ ಖರೀದಿಸಲು ಪ್ರಯತ್ನ ಮಾಡಿದ್ದಾರೆ? ಸಾಕ್ಷಿ ಇದ್ದರೆ ದೂರು ಕೊಡಿ. ಸಾಕ್ಷಿ ಇದ್ದರೆ ನ್ಯಾಯಾಲಯದ ಮುಂದೆ ಆಧಾರಸಹಿತವಾಗಿ ನಿರೂಪಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಆಧಾರಸಹಿತ ನಿರೂಪಿಸದೆ ಇದ್ದಲ್ಲಿ ಸುಳ್ಳು ಆರೋಪ ಮಾಡಿದ್ದಕ್ಕೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದಲ್ಲಿ 137 ಶಾಸಕರಿದ್ದಾರೆ. ನಿಮ್ಮನ್ನು ಅಲುಗಾಡಿಸುವವರು ಯಾರು? ನಿಮ್ಮನ್ನು ಅಲುಗಾಡಿಸಲು ಹೊರಗಡೆ ಯಾರ ಕೈಯಿಂದಲೂ ಸಾಧ್ಯವಿಲ್ಲ. ಒಳಗಡೆ ನಿಮ್ಮ ಪಕ್ಷದ ಬಲವಾದವರು ನೇತೃತ್ವ ವಹಿಸಿ ಸರಕಾರವನ್ನು ಅಲುಗಾಡಿಸಬೇಕೇ ಹೊರತು ಇನ್ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು.

ಬಿಜೆಪಿ ಇವತ್ತು ವಿಪಕ್ಷ ಸ್ಥಾನವನ್ನು ನಿರ್ವಹಿಸುತ್ತಿದೆ. ನಾವು ನಿಮ್ಮ ಪ್ರತಿನಿತ್ಯದ ಭ್ರಷ್ಟಾಚಾರದ ಹಗರಣವನ್ನು ಬಯಲಿಗೆ ಎಳೆಯುತ್ತಿದ್ದೇವೆ. ನಿಮ್ಮ ರಾಜಕೀಯ ತಪ್ಪು ನಿರ್ಧಾರಗಳ ವಿರುದ್ಧ ಜನಾಭಿಪ್ರಾಯ ರೂಪಿಸುತ್ತಿದ್ದೇವೆ. ಜನರು ಇವತ್ತು ನಿಮಗೆ ತಿರುಗಿಬಿದ್ದಿದ್ದಾರೆ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಆ ಸ್ಥಾನದ ಜವಾಬ್ದಾರಿಯನ್ನು ಮರೆತು ಕೇವಲ ಆರೋಪ ಮಾಡುವುದು ರಾಜಕೀಯಪ್ರೇರಿತ; ಬಿಜೆಪಿಯ ಮೇಲೆ ತಪ್ಪು ಅಭಿಪ್ರಾಯ ರೂಪಿಸಲು ಮಾಡುತ್ತಿರುವ ರಾಜಕೀಯ ಷಡ್ಯಂತ್ರದ ಭಾಗ ಎಂದು ಆಕ್ಷೇಪಿಸಿದರು. ನಿಮ್ಮ ಇತ್ತೀಚಿನ ನಡವಳಿಕೆಗಳನ್ನು ನೋಡಿದಾಗ ದಿನನಿತ್ಯ ಸುಳ್ಳು ಹೇಳುವುದು ನಿಮ್ಮ ರಾಜಕೀಯ ಬದುಕಿನ ಭಾಗವಾಗಿದೆ ಎಂದು ಆರೋಪಿಸಿದರು.

ಸುಳ್ಳು ಹೇಳದೆ ಇದ್ದರೆ ನಿಮಗೆ ಊಟ ಮಾಡಿದ ಅನ್ನವೂ ಜೀರ್ಣವಾಗುವುದಿಲ್ಲ; ಸುಳ್ಳು ಹೇಳದೆ ಇದ್ದರೆ ರಾತ್ರಿ ನಿದ್ದೆಯೂ ಬರುವುದಿಲ್ಲ; ಸುಳ್ಳಿನಿಂದಲೇ ನಿಮ್ಮ ರಾಜಕೀಯ ಬದುಕು ಪ್ರಾರಂಭವಾಗಿ ಸುಳ್ಳಿಂದಲೇ ನಿಮ್ಮ ದಿನಚರಿ ಮುಕ್ತಾಯ ಆಗುತ್ತದೆ ಎಂದು ಅನಿಸುತ್ತದೆ. ಆ ರೀತಿ ನೀವು ಸುಳ್ಳು ಆರೋಪವನ್ನು ನಮ್ಮ ಪಕ್ಷದ ಮೇಲೆ ಮಾಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments