Webdunia - Bharat's app for daily news and videos

Install App

ಸಿ.ಟಿ.ರವಿಗೆ ಸಂವಿಧಾನದ ತತ್ವ ಅರ್ಥವಾಗುವುದಿಲ್ಲ-ಸಿದ್ದರಾಮಯ್ಯ

Webdunia
ಮಂಗಳವಾರ, 29 ನವೆಂಬರ್ 2022 (19:00 IST)
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೊಲೆ, ಗಲಭೆಗಳಾಗುತ್ತದೆ ಎಂಬ ಸಿ.ಟಿ. ರವಿ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಸಿ.ಟಿ. ರವಿ ಮೋಸ್ಟ್  ಕಮ್ಯೂನಲ್ ಫೆಲೋ, ಅವರಿಗೆ ಜಾತ್ಯತೀತ ತತ್ವ ಅರ್ಥವಾಗುವುದಿಲ್ಲ, ಸಂವಿಧಾನದ ತತ್ವ ಅರ್ಥವಾಗುವುದಿಲ್ಲ. ಅಂತಹವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಿನ್ನೆ ಶಿವಮೊಗ್ಗದಲ್ಲಿ ಮಲೆನಾಡು ಜನಾಕ್ರೋಶ ಸಭೆ ಯಶಸ್ವಿಯಾಗಿದೆ. ನಾವು ಅಧಿಕಾರದಲ್ಲಿದ್ದಾಗ ಶರಾವತಿ ಸಂತ್ರಸ್ತರ ಹಿತ ಗಮನದಲ್ಲಿಟ್ಟುಕೊಂಡು 56 ಡಿ ನೋಟಿಫಿಕೇಷನ್ ಹೊರಡಿಸಿದ್ದೇವು. ಮದನ್ ಗೋಪಾಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವು. 1950ರಲ್ಲಿ ಶರಾವತಿ ಯೋಜನೆ ಜಾರಿ ಆಗಿದೆ ಹಾಗೂ 1980 ರಲ್ಲಿ ಅರಣ್ಯ ಕಾಯ್ದೆ ಬಂದಿದೆ . ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ನಾವು ಆದೇಶ ಹೊರಡಿಸಿದ್ದೇವೆ. ಆದರೆ ಗಿರೀಶ್ ಆಚಾರ್ ಎಂಬುವರು ಹೈ ಕೋರ್ಟ್​ಗೆ ಹೋದ ಕಾರಣ ಡಿ ನೋಟಿಫಿಕೇಷನ್ ರದ್ದಾಗಿದೆ. ಈಗಿನ ಬಿಜೆಪಿ ಸರ್ಕಾರ ಏನು ಮಾಡಿದೆ. ಯಡಿಯೂರಪ್ಪ, ಬೊಮ್ಮಾಯಿ ಏನು ಮಾಡಿದ್ದಾರೆ. ಬರಿ ರೈತ ನಾಯಕ ಎಂದು ಹೇಳಿಕೊಂಡರೆ ಆಗುವುದಿಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments