ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Krishnaveni K
ಶನಿವಾರ, 26 ಜುಲೈ 2025 (11:27 IST)
ಬೆಂಗಳೂರು: ಚುನಾವಣಾ ಆಯೋಗದ ಬಗ್ಗೆ ಆರೋಪ ಮಾಡ್ತೀರಲ್ಲಾ, ಕಾಂಗ್ರೆಸ್ ಕೂಡಾ ವಿಧಾನಸಭೆಯಲ್ಲಿ ಅಕ್ರಮದಿಂದಲೇ ಗೆದ್ದಿತಾ ಎಂದು ರಾಹುಲ್ ಗಾಂಧಿ ಚುನಾವಣಾ ಅಕ್ರಮ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಮೊನ್ನೆಯಷ್ಟೇ ರಾಹುಲ್ ಗಾಂಧಿ ಸಂಸತ್ ಭವನದ ಮುಂದೆ ಮಾಧ್ಯಮಗಳೊಮದಿಗೆ ಮಾತನಾಡುವಾಗ ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ಕ್ಷೇತ್ರ ಸೇರಿದಂತೆ ದೇಶದಾದ್ಯಂತ ಚುನಾವಣೆಯಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಸೇರಿಸುವ ಮತ್ತು ತೆಗೆದು ಹಾಕುವ ಮೂಲಕ ಅಕ್ರಮ ಮಾಡಿದೆ. ಬಿಜೆಪಿ ಅಕ್ರಮದಿಂದಲೇ ಗೆಲ್ಲುತ್ತಿದೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಟಿ ರವಿ, ‘ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆ ಅದರ ಮೇಲೆ ಯಾವುದೇ ಸಾಕ್ಷಿ ಆಧಾರವಿಲ್ಲದೆ,  ಆರೋಪ ಮಾಡುವುದು ಸಂವಿಧಾನ ವಿರೋಧಿಗಳ ಕೃತ್ಯ. ಪ್ರಜಾಪ್ರಭುತ್ವದಲ್ಲಿ, ಜನಾದೇಶದ ಮೇಲೆ ನಂಬಿಕೆ ಇಡದ ಕಾಂಗ್ರೆಸ್ಸಿನದ್ದು ಪ್ರಜಾಪ್ರಭುತ್ವ ವಿರೋಧಿ ಹೀನ ಮನಸ್ಥಿತಿಗೆ ಹಿಡಿದ ಕೈಗನ್ನಡಿ.

ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸದೇ ಇದ್ದರೆ, ಅದು ಹೇಗೆ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ, ನಿಮ್ಮ ಇಂಡಿ ಒಕ್ಕೂಟದ ಪಕ್ಷಗಳು ಗೆದ್ದವು? ಅವರೂ ಅಕ್ರಮ ಎಸಗಿದ್ದಾರೆಯೇ? ಕರ್ನಾಟಕದಲ್ಲಿ 136 ಸ್ಥಾನಗಳನ್ನು ಗೆದ್ದ ನಿಮ್ಮ ಪಕ್ಷವೂ ಚುನಾವಣಾ ಅಕ್ರಮ ನಡಸಿದ್ದೀರಾ?

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಉತ್ತರಪ್ರದೇಶದಲ್ಲಿ  ಹೇಗೆ 30ಕ್ಕೂ ಅಧಿಕ ಸೀಟುಗಳನ್ನು ಗೆದ್ದಿದ್ದೀರಾ? ತನ್ನ  ವೈಫಲ್ಯಕ್ಕೆ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ ಎಂದು ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments