Publish Date: Wed, 09 Sep 2026 (17:08 IST)
Updated Date: Wed, 09 Sep 2026 (17:14 IST)
ಬೆಂಗಳೂರು: ಗೃಹಲಕ್ಷ್ಮಿಗೆ 3 ವರ್ಷ ಎಂದು ಎಲ್ಲ ಪತ್ರಿಕೆ, ಟಿವಿ, ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತು ಕೊಡಿಸಿದಿರಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ, ಆ ಹಣದಲ್ಲೇ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿಯನ್ನು ಕೊಡಬಹುದಿತ್ತಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ.
ಈ ಸಂಬಂಧ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಗೃಹಲಕ್ಷ್ಮಿಗೆ 3 ವರ್ಷ ಎಂದು ಎಲ್ಲ ಪತ್ರಿಕೆ, ಟಿವಿ, ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತು ಕೊಡಿಸಿದಿರಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ, ಆ ಹಣದಲ್ಲೇ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿಯನ್ನು ಕೊಡಬಹುದಿತ್ತಲ್ಲ?
ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಪಾವತಿಯಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಸರ್ಕಾರಕ್ಕೆ ಗೃಹಲಕ್ಷ್ಮಿ ನೆನಪಾಗುತ್ತದೆ. ಮೂರು ತಿಂಗಳ ಬಾಕಿ ಹಣ ಎಲ್ಲಿ ಹೋಯಿತು? ಅದರ ಲೆಕ್ಕವನ್ನು ಪಾರದರ್ಶಕವಾಗಿ ಸರ್ಕಾರ ಜನರ ಮುಂದೆ ಇಡಲೇಬೇಕು.
ಗೃಹಲಕ್ಷ್ಮಿ ಯೋಜನೆಗೆ ಹಣವನ್ನೇ ಪಾವತಿಸದ ಮೇಲೆ ಅದರ ಜಾಹೀರಾತು ಹಾಕಿ ಸಂಭ್ರಮಿಸುವುದಾದರೂ ಏಕೆ? ಗೃಹಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲು ನೋಡಬೇಡಿ. ಮೊದಲು ಬಾಕಿ ಇರುವ 3 ತಿಂಗಳ ಮೊತ್ತವನ್ನು ಬಿಡುಗಡೆಗೊಳಿಸಿ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ