Webdunia - Bharat's app for daily news and videos

Install App

ಸಿಟಿ ರವಿ ಕೇಸ್ ಸಿಐಡಿಗೆ: ಶಾಸಕ ಹೇಳಿದ್ದೇನು

Krishnaveni K
ಮಂಗಳವಾರ, 24 ಡಿಸೆಂಬರ್ 2024 (11:17 IST)
ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಪ್ರಯೋಗಿಸಿದ ಸಿಟಿ ರವಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಇದರ ಬಗ್ಗೆ ಸಿಟಿ ರವಿ ಹೇಳಿದ್ದೇನು ನೋಡಿ.

ಬೆಳಗಾವಿ ಅಧಿವೇಶನದಲ್ಲಿ ಅಂಬೇಡ್ಕರ್ ಗೆ ಅವಮಾನ ಪ್ರಕರಣದ ಬಗ್ಗೆ ಪ್ರತಿಭಟನೆ ಮಾಡುವಾಗ ಮೊದಲು ರಾಹುಲ್ ಗಾಂಧಿಗೆ ಸಿಟಿ ರವಿ ಡ್ರಗ್ ಅಡಿಕ್ಟ್ ಎಂದಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಿಟ್ಟು ತರಿಸಿತ್ತು. ಇದಕ್ಕೆ ಅವರು ಸಿಟಿ ರವಿಗೆ ಕೊಲೆಗಾರ ಎಂದಿದ್ದರು.

ಇದರಿಂದ ಕೆರಳಿದ ಸಿಟಿ ರವಿ ಅಶ್ಲೀಲ ಪದ ಬಳಸಿ ಪ್ರತಿಕ್ರಿಯಿಸಿದ್ದಾರೆ ಎಂಬುದು ಆರೋಪವಾಗಿದೆ. ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಸಿಟಿ ರವಿಯವರನ್ನು ಬಂಧಿಸಿ ಬಳಿಕ ಹೈಕೋರ್ಟ್ ನಿರ್ದೇಶನದ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಂಧಿಸಿದ ಬಳಿಕ ಸಿಟಿ ರವಿಯವರ ಜೊತೆ ಪೊಲೀಸರು ನಡೆದುಕೊಂಡ ರೀತಿ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಟಿ ರವಿ ಸಿಐಡಿಗೆ ವಹಿಸಿರುವ ವಿಚಾರದ ಬಗ್ಗೆ ನನಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಒಂದು ವೇಳೆ ಸಿಐಡಿಗೆ ವಹಿಸಿದ್ದೇ ಆದರೆ ಈ ಘಟನೆಯಲ್ಲಿ ಅನ್ಯಾಯ ಆಗಿರುವ ನನಗೂ ನ್ಯಾಯ ಸಿಗಬೇಕು. ನನ್ನನ್ನು ತಪ್ಪಾಗಿ ನಡೆಸಿಕೊಂಡವರಿಗೂ ಶಿಕ್ಷೆಯಾಗಬೇಕು ಎಂದು ಸಿಟಿ ರವಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments