Webdunia - Bharat's app for daily news and videos

Install App

ಗಲಾಟೆ ಮಾಡಿದ್ದು ಮುಸ್ಲಿಮರು, ಹಿಂದೂಗಳನ್ನು ಯಾಕೆ ಬಂಧಿಸಿದ್ದೀರಿ: ಸಿಟಿ ರವಿ ಕಿಡಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (11:01 IST)
ಮಂಡ್ಯ: ನಾಗಮಂಗಲದಲ್ಲಿಗಣೇಶ ಮೆರವಣಿಗೆ ಮಾಡುತ್ತಿದ್ದ ಹಿಂದೂಗಳ ಮೇಲೆ ಅನ್ಯಕೋಮಿನವರು ದಾಳಿ ನಡೆಸಿರುವುದನ್ನು ಶಾಸಕ ಸಿಟಿ ರವಿ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಹಿಂದೂಗಳನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಸೀದಿ ಮತ್ತು ದರ್ಗಾ ರಸ್ತೆಯ ಮುಂದೆ ಮೆರವಣಿಗೆ ಸಾಗುತ್ತಿದ್ದಾಗ ಅಡ್ಡಿಪಡಿಸಿದ ಅನ್ಯಕೋಮಿನ ಯುವಕರು ಬಳಿಕ ಮೆರವಣಿಗೆ ಸಾಗುತ್ತಿದ್ದವರ ಮೇಲೆ ಸಿಕ್ಕ ಸಿಕ್ಕಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇಷ್ಟಕ್ಕೇ ನಿಲ್ಲದೇ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಿದ್ದಾರೆ.

ಅದರೆ ಇದೀಗ ಮೆರವಣಿಗೆ ನಡೆಸುತ್ತಿದ್ದ ಸಮಿತಿಯ ಸದಸ್ಯರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ವಿಚಾರವಾಗಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹಿಂಸಾಚಾರ ಮಾಡಿದವರು ಮುಸ್ಲಿಮರು, ಆದರೆ ಬಂಧಿಸಿರುವುದು ಗಣೇಶ ಸಮಿತಿ ಸದಸ್ಯರನ್ನು. ಇದು ಯಾವ ನ್ಯಾಯ’ ಎಂದು ಸಿಟಿ ರವಿ ಹೇಳಿದ್ದಾರೆ.

‘ನಾಗಮಂಗಲ ಗಲಭೆ ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ. ಪೆಟ್ರೋಲ್ ಬಾಂಬ್ ಎಸೆದು ಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೊಲೀಸರ ಕೃತ್ಯ ಅಕ್ಷಮ್ಯ. ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ’ ಎಂದು ಸಿಟಿ ರವಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments