Webdunia - Bharat's app for daily news and videos

Install App

ರಾಜ್ಯದಲ್ಲಿ ತುಘಲಕ್‌ ಸರ್ಕಾರ ನಡೆಯುತ್ತಿದೆ ಎಂದ ಸಿ.ಟಿ.ರವಿ

geetha
ಶುಕ್ರವಾರ, 23 ಫೆಬ್ರವರಿ 2024 (20:00 IST)
ಬೆಂಗಳೂರು :ರಾಮನಗರದಲ್ಲಿ ಎಸ್‌ಡಿಪಿಐ ವಕೀಲನೊಬ್ಬ ಗ್ಯಾನವ್ಯಾಪಿ ಮಸೀದಿಯ ಕುರಿತು ನ್ಯಾಯಾಂಗ ನಿಂದನೆ ನಡೆಸಿರುವುದು ಮತ್ತು ಹೊಸಪೇಟೆಯಲ್ಲಿ ರಾಮಭಕ್ತರಿಗೆ ಜೀವ ಬೆದರಿಕೆ ಹಾಕಿರುವ ಘಟನೆಗಳು ಏಕಾಏಕಿ ನಡೆದಿಲ್ಲ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ. 
 
ಈ ಹಿಂದೆ ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌ ಗೋದ್ರಾ‌ ಮಾದರಿಯ ಹತ್ಯಾಕಾಂಡ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು. ಈಗ ನಡೆದಿರುವ ಘಟನೆ ಕಾಕತಾಳೀಯವಲ್ಲ. ಹೊಸಪೇಟೆಯಲ್ಲಿ ಬಂಧಿತನಾಗಿರುವ ವ್ಯಕ್ತಿಯೊಡನೆ ಬಿ.ಕೆ. ಹರಿಪ್ರಸಾದ್‌ ರನ್ನೂ ತನಿಖೆಗೊಳಪಡಿಸಬೇಕೆಂದು.  ಘಟನೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು  ಸಿ.ಟಿ. ರವಿ ಒತ್ತಾಯಿಸಿದರು. 

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಗುರುವಾರ ಮತಾಂಧ ವ್ಯಕ್ತಿಯೊಬ್ಬ ಅಯೋಧ್ಯೆಯಿಂದ ಹಿಂದಿರುಗಿ ಬರುತ್ತಿದ್ದ ರಾಮಭಕ್ತರಿಗೆ ಗೋದ್ರಾ ಮಾದರಿಯ ಹತ್ಯಾಕಾಂಡ ನಡೆಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ಈತನನ್ನು ರಾಮಭಕ್ತರೇ ಹಿಡಿದು ಕೊಟ್ಟರೂ ತಪ್ಪಿಸಿಕೊಳ್ಳಲು ಅವಕಾಶ ನೀಡಿ, ಬಳಿಕ ನಮ್ಮ ಪ್ರತಿಭಟನೆಗೆ ಮಣಿದು ಬಂಧಿಸಲಾಗಿದೆ. ರಾಜ್ಯದಲ್ಲಿ ತುಘಲಕ್‌ ಸರ್ಕಾರ ನಡೆಯುತ್ತಿದೆ ಎಂದು ಸಿ.ಟಿ. ರವಿ ಹೇಳಿದರು. ಶುಕ್ರವಾರ ನಗರದ ಖಾಸಗಿ ಹೋಟೆಲ್‌ ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ  ಅವರು ಮಾತನಾಡಿದರು. 

ತಿಕ್ಕಲು ಮುಸ್ಲಿಂ ದೊರೆ ತುಘಲಕ್‌ ದರ್ಬಾರ್‌ ನಿಂದ ಪ್ರೇರೇಪಣೆ ಪಡೆದಂತೆ ಕಾಣುತ್ತಿರುವ ಕರ್ನಾಟಕ ರಾಜ್ಯ ಸರ್ಕಾರ, ನಾಡಗೀತೆಯ ವಿಷಯದಲ್ಲಿ, ಕುವೆಂಪು ಘೋಷವಾಕ್ಯದಲ್ಲಿ ಹಾಗೂ ಮತ್ತಿತರ ಧಾರ್ಮಿಕ ವಿಷಯಗಳಲ್ಲಿ ಘಳಿಗೆಗೊಂದು ಸುತ್ತೋಲೆ ಹೊರಡಿಸುತ್ತಿದೆ ಎಂದು ಅವರು ಆರೋಪಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments