ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ: ಸಿ.ಟಿ.ರವಿ ಆಕ್ಷೇಪ

Krishnaveni K
ಸೋಮವಾರ, 10 ನವೆಂಬರ್ 2025 (15:04 IST)
ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.
 
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು.
 
ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‍ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.
 
ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ; ಮಹಾರಾಷ್ಟ್ರ ಪೊಲೀಸರು ಬಂದು ಹಿಡಿಯುತ್ತಾರೆ. ಇದಕ್ಕೆ ರಾಜಾಶ್ರಯವೇ ಕಾರಣ ಎಂದು ದೂರಿದರು.
 
ರಾಜ್ಯದ ಜೈಲಿನ ಇಂಥ ಚಟುವಟಿಕೆಗಳ ಕುರಿತು ಎನ್‍ಐಎ, ಇಲ್ಲಿನ ಬೇಹುಗಾರಿಕಾ ದಳಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿತ್ತು. ಆದರೂ, ನಿರ್ಲಕ್ಷ್ಯ ವಹಿಸಿದ್ದಾರೆಂದರೆ ಅದು ನಿರ್ಲಕ್ಷ್ಯವಲ್ಲ; ಕೃಪೆ ಎಂದು ಟೀಕಿಸಿದರು. ಆ ಕೃಪೆಗೆ ಸಿಎಂ, ಗೃಹ ಸಚಿವರು ಹೊಣೆ ಹೊತ್ತುಕೊಳ್ಳಬೇಕು. ಆದ್ದರಿಂದ ಮುಖ್ಯಮಂತ್ರಿ, ಗೃಹ ಸಚಿವರಿಗೆ ಅಧಿಕಾರದಲ್ಲಿ ಇರುವ ನೈತಿಕತೆ ಇಲ್ಲ. ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಯನ್ನು ನಾನು ಸ್ವಲ್ಪ ಹೆಚ್ಚು ಪ್ರೀತಿಸುತ್ತೇನೆ: ಚಿರಾಗ್ ಪಾಸ್ವಾನ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಪ್ರಕರಣ: ಗೃಹ ಸಚಿವರ ಮಹತ್ವದ ತೀರ್ಮಾನ

ಪತ್ನಿಯ ಕಿರುಕುಳ, ಮದುವೆಯಾದ 8 ತಿಂಗಳಿಗೆ ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ

ಉ.ಪ್ರದೇಶ ಶಾಲಾ, ಕಾಲೇಜುಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸಿದ ಯೋಗಿ ಆದಿತ್ಯನಾಥ್

ಮುಸ್ಲಿಮರ ನಮಾಜ್ ಸಮರ್ಥಿಸಲು ಹೋಗಿ ಹಿಂದೂಗಳು ಬಾರ್ ನಲ್ಲಿರ್ತಾರೆ ಎಂದ ಕೈ ನಾಯಕ ಆಂಜನೇಯ

ಮುಂದಿನ ಸುದ್ದಿ
Show comments